ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಹುಬ್ಬಳ್ಳಿಗೆ ಮೊಟ್ಟಮೊದಲ ಬಾರಿಗೆ ಆಗಮಿಸುತ್ತಿದ್ದು, ಜಗದೀಶ್ ಶೆಟ್ಟರ್ ಸ್ವಾಗತಕ್ಕೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಇಂದು ಹುಬ್ಬಳ್ಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಗಮಿಸುತ್ತಿದ್ದು, ಅದ್ದೂರಿಯಾಗಿ ಸ್ವಾಗತ ಕೋರಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಬೃಹತ್ ಮೆರವಣಿಗೆ ಮಾಡಲು ನಿರ್ಧಾರ ಮಾಡಿದ್ದಾರೆ.
ಇನ್ನೂ ಮೆರವಣಿಗೆ ಮುಖಾಂತರವೇ ಟಿಕೆಟ್ ತಪ್ಪಿಸಿದ ವಿರೋಧಿಗಳಿಗೆ ನಡುಕ ಹುಟ್ಟಿಸಲು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಂದಾಗಿದ್ದಾರೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಉತ್ತರ ಕರ್ನಾಟಕದ ಕಾಂಗ್ರೆಸ್ಗೆ ಬಲ ಬಂದಂತಾಗಿದೆ.