ಹುಬ್ಬಳ್ಳಿ: ಬಿಜೆಪಿ ಹೈಕಮಾಂಡ್ ಬುಧವಾರ ರಾತ್ರಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲೂ, ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರ ಹೆಸರು ಪ್ರಕಟವಾಗಿಲ್ಲ ಇದರಿಂದ ಮಾಜಿ ಸಿಎಂಗೆ ನಿರಾಸೆ ಉಂಟು ಮಾಡಿದೆ.
ಶೆಟ್ಟರ್ ಪರವಾಗಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ತಮ್ಮ ನಾಯಕನಿಗೆ ಟಿಕೆಟ್ ಕೊಡುವಂತೆ ಆಗ್ರಹಿಸಿದ್ದರು. ಶೆಟ್ಟರ್ ಸಹ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿ, ತಮ್ಮ ನಿಲುವು ಅಚಲ ಎಂಬ ಸಂದೇಶವನ್ನು ವರಿಷ್ಠರಿಗೆ ರವಾನಿಸಿದ್ದರು. ಶೆಟ್ಟರ್ ತಮ್ಮ ನಿರ್ಧಾರ ಅಚಲ ಎಂದು ತಿಳಿಸಿದರು. ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಎರಡನೇ ಪಟ್ಟಿಯಲ್ಲೂ ಹೆಸರು ಇಲ್ಲದಿರುವುದು ಶೆಟ್ಟರ್ ಮತ್ತು ಅವರ ಬೆಂಬಲಿಗರಲ್ಲಿ ತೀವ್ರ ನಿರಾಶೆ ಮೂಡಿಸಿದೆ.