ಹುಬ್ಬಳ್ಳಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನಲೆ ಇಲ್ಲಿಯ ಗದಗ ರಸ್ತೆಯ ಅಂಬೇಡ್ಕರ್ ಪ್ರತಿಮೆ ಬಳಿ ಸಂಭ್ರಮಾಚರಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಸುವರ್ಣ ಕಲ್ಲಕುಂಟ್ಲಾ ನೇತೃತ್ವದಲ್ಲಿ ಮಹಿಳಾ ಮಣಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪರಸ್ಪರ ಬಣ್ಣ ಎರಚಿ ವಿಜಯೋತ್ಸವ ಆಚರಿಸಿದರು.