ಹುಬ್ಬಳ್ಳಿ: ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹಲವು ಬಾರಿ ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದ ಚಿರತೆಯಿಂದ ಜನರು ಭಯಭೀತರಾಗಿದ್ದರು. ಅಲ್ಲದೆ ಚಿರತೆ ಕಂಡು ಜಮೀನಿಗೆ ತೆರಳುವುದಕ್ಕೂ ಆತಂಕಗೊಂಡಿದ್ದ ರೈತರು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.ಇನ್ನೂ ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ಎರಡೂ ದಿನಗಳಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಚಿರತೆ ಸೆರೆ ಹಿಡಿದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.