ಹುಬ್ಬಳ್ಳಿ : ದೇಶಕ್ಕೆ ಮೋದಿ ಆಪತ್ಬಾಂಧವ.ನಾವು ಮೋದಿ ಅವರನ್ನ ದೇವರು ಅಂದಿಲ್ಲ. ಮೋದಿ ಅವರೂ ತಮ್ಮನ್ನು ದೇವರು ಅಂತ ಅಂದುಕೊಂಡಿಲ್ಲ . ನರೇಂದ್ರ ಮೋದಿ ಅವರು ಒಬ್ಬ ಮಹಾನ್ ನಾಯಕ ಎಂದು ಮೋದಿ ದೇವರು ಎಂಬ ಕಾಂಗ್ರೆಸ್ ಟೀಕೆ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಗಡಿಯಲ್ಲಿ ಭದ್ರತೆ ನೀಡಿ ಅತ್ಯಂತ ಕಷ್ಟಕಾಲದಲ್ಲಿ ಭಾರತವನ್ನು ಎತ್ತಿ ಹಿಡಿದಿದ್ದಾರೆ.ಆಂತರಿಕ ಸುರಕ್ಷತೆ ತಂದು ದೇಶ ಸುಭದ್ರಗೊಳಿಸಿದ್ದಾರೆ.ಸಾರ್ವಜನಿಕವಾಗಿ ಯಾರೇ ಬಂದ್ರೂ ಮೋದಿ ನಮಸ್ಕಾರ ಮಾಡ್ತಾರೆ ಎಂದರು.
ರೌಡಿಶೀಟರ್ ಫೈಟರ್ ರವಿಗೆ ಮೋದಿ ನಮಸ್ಕಾರ ಪ್ರಧಾನಿ ಹುದ್ದೆಗೆ ಕಳಂಕ ತಂದಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ : ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ರೀತಿಯ ಮಾತುಕತೆ ಮಾಡಿಲ್ಲ. ಸೋಮಣ್ಣ ನಾನು ಹಳೆಯ ಸ್ನೇಹಿತರು ಅವರು ನಮ್ಮ ಭೇಟಿ ಕೇವಲ ಔಪಚಾರಿಕ ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ ಎಂದರು.
ಕರ್ನಾಟಕದಲ್ಲಿ ಮೋದಿ ಸುನಾಮಿ ಶುರುವಾಗಿದೆ. ಪ್ರಧಾನಿ ಮೋದಿ ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿದ್ದಾರೆ ಅವರು ಬಂದು ಹೋಗಿದ್ದರಿಂದ ಮೋದಿ ಮತ್ತು ಬಿಜೆಪಿ ಪರ ಒಲವು ಹೆಚ್ಚಾಗಿದೆ . ರಾಜ್ಯದಲ್ಲಿ ಮೋದಿ ಸುನಾಮಿ ಎದ್ದಿದೆ. ಕಾಮಗಾರಿಗಳ ಸಹಜವಾಗಿಯೇ ಕ್ರೆಡಿಟ್ ವಾರ್ ಇದೆ. ಪಕ್ಕದ ಮನೆಯವಳು ಗಂಡು ಹಡೆದರೆ ಇವರು ಪೇಡೆ ಹಂಚುವ ಕೆಲಸ ಮಾಡ್ತಿದಾರೆ ಎಂದು ಕಾಂಗ್ರೆಸ್ ಗೆ ಟಾಂಗ್ ಕೊಟ್ಟರು.
ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಮುಷ್ಕರ ಕರೆ ಪ್ರತಿಕ್ರಿಯಿಸಿದ ಸಿಎಂ: ಅವರ ಜೊತೆ ನಮ್ಮವರು ಮಾತುಕತೆ ನಡೆಸಿದ್ದಾರೆ. ಇಂಧನ ಸಚಿವರು ಚರ್ಚೆಯಲ್ಲಿದ್ದಾರೆ. ಕೂಡಲೇ ಅದನ್ನು ಬಗೆಹರಿಸುತ್ತಾರೆ ಎಂದು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಮುಷ್ಕರ ಕರೆ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಮ್ಮ ಸಚಿವರು ಈಗಾಗಲೇ ಎರಡು ಸುತ್ತಿನ ಮಾತುಕತೆ ಮಾಡಿದ್ದಾರೆ.ಎಲ್ಲ ವಿವರಗಳನ್ನ ಹಂಚಿಕೊಳ್ಳೋಕೆ ಆಗಲ್ಲ ಎಂದರು.