ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಚೆನ್ನಮ್ಮ ವೃತ್ತದವರೆಗೆ ಬೃಹತ್ ಮೆರವಣಿಗೆ ಮೂಲಕ ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಬೆಂಬಲಿಗರು, ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪ್ರಸಾದ್ ಅಬ್ಬಯ್ಯಯವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸಂದರ್ಭದಲ್ಲಿ ಪ್ರಸಾದ್ ಅಬ್ಬಯ್ಯ ಅವರಿಗೆ ಜಯವಾಗಲಿ, ಸಚಿವ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಲಿ ಎಂದು ಘೋಷಣೆಗಳನ್ನು ಕೂಗಿದರು.
ಇದೇ ವೇಳೆ ರಸ್ತೆಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸಂದರ್ಭದಲ್ಲಿ ಸುಮಾರು ಅರ್ಧಾ ತಾಸು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದೊರಾಜ್ ಮನ್ನೆಕುಂಟ್ಲಾ, ನಿರಂಜನಯ್ಯ ಹಿರೇಮಠ, ಇಮ್ರಾನ್ ಎಲಿಗಾರ, ಸುಧಾ ಮನ್ನೆಕುಂಟ್ಲಾ, ಪ್ರಕಾಶ ಬುರಬುರೆ, ಇಲಿಯಾಸ್ ಮನಿಯಾರ್, ಬೆಂಬಲಿಗರಾದ ಗುರುನಾಥ ಉಳ್ಳಿಕಾಶಿ, ಉಜ್ವಲ್ ಗುಣವಿ, ಚೇತನ್ ಹಿರೇಕೆರೂರ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.
ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…
ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…
“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…
ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.
ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್ ಸ್ಕಿನ್ ಭಾರತೀಯ ಎಂದು…