ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಹಾರಾಷ್ಟ್ರ ಮೂಲದ ಪೇಶ್ವಾಗಳು ಅಥವಾ ದೇಶಸ್ತ ಬ್ರಾಹ್ಮಣರು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು ಇಡೀ ಬ್ರಾಹ್ಮಣ ಕುಲಕ್ಕೆ ಅವಮಾನ ಮಾಡಿದಂತೆ. ಮಾಹಿತಿಯ ಇಲ್ಲದೆ ಯಥಾ ಪ್ರಕಾರ ನಾಲಿಗೆ ಹರಿಬಿಟ್ಟಿದ್ದಾರೆಂದು ವಿಶ್ವ ವಿಪ್ರ ಸೇವಾ ಟ್ರಸ್ಟ್ ವತಿಯಿಂದ ರಸ್ತೆಗಿಳಿದು ಪ್ರತಿಭಟನೆ ಮಾಡಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಯಾವುದೇ ಪೇಶ್ವೆಗಳಾಗಲಿ ಅಥವಾ ದೇಶಸ್ತ ಬ್ರಾಹ್ಮಣರಲ್ಲವೆಂದು ದೇಶದ ಸ್ವತಂತ್ರ ಹೋರಾಟದಲ್ಲಿ ಬ್ರಾಹ್ಮಣರ ಕೊಡುಗೆ ಅಪಾರ, ಜಾನ್ಸಿ ರಾಣಿ ಲಕ್ಷ್ಮೀಬಾಯಿ, ಚಂದ್ರಶೇಖರ್ ಆಜಾದ್, ಮಂಗಲ್ ಪಾಂಡೆ, ಮದನ್ ಲಾಲ್ ಡಿಂಗ್ರ, ವೀರ ಸಾವರ್ಕರ್ ಹಾಗೂ ಇನ್ನೂ ಹಲವು ಬ್ರಾಹ್ಮಣರು ತಮ್ಮ ಜೀವನವನ್ನೇ ಅರ್ಪಣೆ ಮಾಡಿದ್ದಾರೆ. ಇಷ್ಟೆಲ್ಲ ತಿಳಿದರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಅಪಮಾನ ಮಾಡಿದ್ದಾರೆ. ಕೂಡಲೆ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.