News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ದೆಹಲಿಯಿಂದ ಹುಬ್ಬಳ್ಳಿಗೆ ಮಂಗಳವಾರ ರಾತ್ರಿ ವಿಶೇಷ ವಿಮಾನದಲ್ಲಿ ಬಂದ ರಾಹುಲ್ ಗಾಂಧಿ

Hubballi: Rahul Gandhi arrived in a special flight from Delhi to Hubballi on Tuesday night.
Photo Credit : Twitter

ಹುಬ್ಬಳ್ಳಿ: ದೆಹಲಿಯಿಂದ ಹುಬ್ಬಳ್ಳಿಗೆ ಮಂಗಳವಾರ ರಾತ್ರಿ ವಿಶೇಷ ವಿಮಾನದಲ್ಲಿ ಬಂದಿಳಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.

ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಹಿನ್ನೆಲೆ ಬಂದ ರಾಹುಲ್​ ಗಾಂಧಿಯನ್ನು ವಿಮಾನ ನಿಲ್ದಾಣದಿಂದ ಅವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿಕೊಂಡು ಹೋಟೆಲ್​ಗೆ ಕರೆದುಕೊಂಡು ಬಂದಿದ್ದಾರೆ.

ಗೋಕುಲ ರಸ್ತೆಯ ಫಾರ್ಚೂನ್​ ಹೋಟೆಲ್​​ನಲ್ಲಿ ಸಭೆ ನಡೆಯಲಿದ್ದು, ಹೋಟೆಲ್​ಗೆ ಕಾಂಗ್ರೆಸ್ ನಾಯಕರು ಪ್ರವೇಶಿಸಲು ಮುಂದಾದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಆದರೆ ಪಾಸ್ ಇದ್ದವರನ್ನು ಮಾತ್ರ ಬಿಡುತ್ತಿದ್ದು, ತಮ್ಮನ್ನೂ ಒಳ ಬಿಡುವಂತೆ ಕೆಲ ನಾಯಕರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದೂ ಕಂಡುಬಂತು. ಇನ್ನು ಮುಂಚಿತವಾಗಿ ರೂಮ್ ಬುಕ್ ಮಾಡಿರುವ ಗ್ರಾಹಕರು ಕೂಡ ಈ ವೇಳೆ ಪರದಾಡುವಂತಾಗಿತ್ತು. ಹೋಟೆಲ್​ನಲ್ಲಿ ತಮಗೆ ಪ್ರೆಸಿಡೆನ್ಷಿಯಲ್​ ಸೂಟ್​ ಬೇಡ ಎಂದು ಹೇಳಿರುವ ರಾಹುಲ್ ಗಾಂಧಿ, ಸಾಮಾನ್ಯ ರೂಮ್​ ಬುಕ್ ಮಾಡುವಂತೆ ಸೂಚಿಸಿದರು.

ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು