ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನಧಿಕೃತ ಕಟ್ಟಡ ಹಾಗೂ ಶೆಡ್ಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ನಿಯಮ ಬಾಹಿರವಾಗಿ ಫುಟ್ ಪಾತ್ ಅತಿಕ್ರಮಣ ಮಾಡಿಕೊಂಡು ಶೆಡ್ ನಿರ್ಮಾಣ ಮಾಡಿದವರಿಗೆ ಕಾರ್ಯಾಚರಣೆ ಮೂಲಕ ಬಿಸಿ ಮುಟ್ಟಿಸಲು ನಿರ್ಧಾರ ಮಾಡಿದೆ.
ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಕಡೆಯಲ್ಲಿ ನಿರ್ಮಾಣಗೊಂಡಿರುವ ಶೆಡ್ಗಳಿಗೆ ಈ ಹಿಂದೆಯೇ ತೆರವು ಮಾಡುವಂತೆ ಪಾಲಿಕೆ ನೋಟಿಸ್ ನೀಡಿದ್ದು, ನೋಟಿಸ್ಗೂ ಬೆಲೆ ಕೊಡದೇ ಇರುವ ಶೆಡ್ಗಳನ್ನು ಜೆಸಿಬಿ ಕಾರ್ಯಾಚರಣೆ ಮೂಲಕ ತೆರವು ಮಾಡಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಕ್ಲೀನ್ ಸಿಟಿ ನಿರ್ಧಾರ ಮಾಡಿದೆ.
ಇನ್ನೂ ವಲಯ ಕಚೇರಿ-5ರ ವ್ಯಾಪ್ತಿಯಲ್ಲಿ ಬರುವ ಶಿರೂರ್ ಪಾರ್ಕ್ ಹಾಗೂ ಕಾಟನ್ ಮಾರ್ಕೆಟ್ ಪೊಲೀಸ್ ಠಾಣೆ ಹಿಂಬಾಗದಲ್ಲಿರುವ ಅನಧಿಕೃತ ಶೆಡ್ಗಳನ್ನು ಜೆಸಿಬಿ ಮೂಲಕ ತೆರುವು ಮಾಡಲಾಗುತ್ತಿದೆ. ಅಲ್ಲದೇ ಇನ್ನೂ ಬಹುತೇಕ ಕಡೆಯಲ್ಲಿ ಅನಧಿಕೃತ ಕಟ್ಟಡಗಳು ತಲೆಯೆತ್ತಿದ್ದು, ಈ ಬಗ್ಗೆ ಪಾಲಿಕೆ ಕಾರ್ಯಾಚರಣೆ ನಡೆಸಿ ಬಿಸಿ ಮುಟ್ಟಿಸುವ ಕಾರ್ಯ ಮಾಡಬೇಕಿದೆ.