ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ಮಠದ ಕಾಣಿಕೆ ಪೆಟ್ಟಿಗೆಯಲ್ಲಿ, ಕೇವಲ 28 ದಿನಗಳಲ್ಲಿ 22.55 ಲಕ್ಷ ರೂ. ಸಂಗ್ರಹಗೊಂಡಿದೆ. ಕಳೆದ ಏಪ್ರಿಲ್ 19 ರಿಂದ ಮೇ 17 ರವರೆಗಿನ ಅವಧಿಯಲ್ಲಿ, ಶ್ರೀ ಮಠದ ಕಾಣಿಕೆ ಪೆಟ್ಟಿಗೆಯಲ್ಲಿ 22,55,972 ರೂ. ಸಂಗ್ರಹಗೊಂಡಿದ್ದು, ಮೇ 17 ರಂದು ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶ್ರೀ ಸಿದ್ಧಾರೂಢನಗರ ಶಾಖೆಯ ಮ್ಯಾನೇಜರ್, ಸಿಬ್ಬಂದಿ ಹಾಗೂ ಭಕ್ತರ ಸಮ್ಮುಖದಲ್ಲಿ ಕಾಣಿಕೆ ಪೆಟ್ಟಿಗೆ ತೆರೆದು ಎಣಿಕೆ ಮಾಡಲಾಯಿತು. ಎಣಿಕೆ ಮೇಲ್ವಿಚಾರಣೆಯನ್ನು ಟ್ರಸ್ಟ್ ಕಮಿಟಿ ಚೇರ್ಮನ್ ಬಸವರಾಜ ಕಲ್ಯಾಣಶೆಟ್ಟರ, ವೈಸ್ ಚೇರ್ಮನ್ ಉದಯಕುಮಾರ ನಾಯ್ಕ, ಗೌರವ ಕಾರ್ಯದರ್ಶಿ ಸರ್ವಮಂಗಳಾ ಪಾಠಕ, ಧರ್ಮದರ್ಶಿಗಳಾದ ಮಂಜುನಾಥ ಮುನವಳ್ಳಿ, ವಿನಾಯಕ ಫೋಡೈ ಹಾಗೂ ಇತರರಿದ್ದರು.