News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಮಠದಲ್ಲಿ ಕೇವಲ 28 ದಿನಗಳಲ್ಲಿ 22.52 ಲಕ್ಷ ರೂ. ಕಾಣಿಕೆ ಸಂಗ್ರಹ

Rs 22.52 lakh was collected in just 28 days at Sri Siddharoodha Mutt. Donation Collection
Photo Credit : News Kannada

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ಮಠದ ಕಾಣಿಕೆ ಪೆಟ್ಟಿಗೆಯಲ್ಲಿ, ಕೇವಲ 28 ದಿನಗಳಲ್ಲಿ 22.55 ಲಕ್ಷ ರೂ. ಸಂಗ್ರಹಗೊಂಡಿದೆ. ಕಳೆದ ಏಪ್ರಿಲ್ 19 ರಿಂದ ಮೇ 17 ರವರೆಗಿನ ಅವಧಿಯಲ್ಲಿ, ಶ್ರೀ ಮಠದ ಕಾಣಿಕೆ ಪೆಟ್ಟಿಗೆಯಲ್ಲಿ 22,55,972 ರೂ. ಸಂಗ್ರಹಗೊಂಡಿದ್ದು, ಮೇ 17 ರಂದು ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶ್ರೀ ಸಿದ್ಧಾರೂಢನಗರ ಶಾಖೆಯ ಮ್ಯಾನೇಜರ್, ಸಿಬ್ಬಂದಿ ಹಾಗೂ ಭಕ್ತರ ಸಮ್ಮುಖದಲ್ಲಿ ಕಾಣಿಕೆ ಪೆಟ್ಟಿಗೆ ತೆರೆದು ಎಣಿಕೆ ಮಾಡಲಾಯಿತು. ಎಣಿಕೆ ಮೇಲ್ವಿಚಾರಣೆಯನ್ನು ಟ್ರಸ್ಟ್ ಕಮಿಟಿ ಚೇರ್ಮನ್ ಬಸವರಾಜ ಕಲ್ಯಾಣಶೆಟ್ಟರ, ವೈಸ್ ಚೇರ್ಮನ್ ಉದಯಕುಮಾರ ನಾಯ್ಕ, ಗೌರವ ಕಾರ್ಯದರ್ಶಿ ಸರ್ವಮಂಗಳಾ ಪಾಠಕ, ಧರ್ಮದರ್ಶಿಗಳಾದ ಮಂಜುನಾಥ ಮುನವಳ್ಳಿ, ವಿನಾಯಕ ಫೋಡೈ ಹಾಗೂ ಇತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು