News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದ ಶೆಟ್ಟರ್

Shettar casts his vote along with his family
Photo Credit : News Kannada

ಹುಬ್ಬಳ್ಳಿ: ಇಲ್ಲಿಯ ಕುಸುಗಲ್ ರಸ್ತೆ ಶಬರಿ ನಗರದ ಎಸ್.ಬಿ.ಐ ಆಂಗ್ಲ ಮಾಧ್ಯಮ ಶಾಲೆಯ ಮತಗಟ್ಟೆ ನಂ. 122 ರಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆ ದೊಡ್ಡ ಪ್ರಮಾಣದಲ್ಲಿ ಮತದಾನವಾಗುತ್ತಿದೆ . ನಾನು ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಬಳಿಕ ಜನರಿಂದ ಹಿಂದಿಗಿಂತಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನರ ಉತ್ಸಾಹ ಗಮನಿಸಿದರೆ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಮನೆಮನೆಗೆ ಭೇಟಿ ನೀಡಿ ಮಂಗಳವಾರ ಪ್ರಚಾರ ನಡೆಸಿದಾಗ, ಜನರು ಸಹ ಉತ್ತಮವಾಗಿ ಸ್ಪಂದಿಸಿದ್ದಾರೆ. ಮತದಾರರಿಗೆ ಬಿಜೆಪಿ ಅಭ್ಯರ್ಥಿಯ ಮುಖ ಪರಿಚಯವೇ ಇಲ್ಲ. ಹಾಗಾಗಿ, ನನ್ನ ಗೆಲುವು ನಿಶ್ಚಿತ ಎಂದರು.

ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಚುನಾವಣೆಯೇ ಹೊರತು, ಶೆಟ್ಟರ್ ಮತ್ತು ಕೇಂದ್ರದ ನಡುವಣ ಚುನಾವಣೆಯಲ್ಲ. ಬಿಜೆಪಿಯವರು ಪಕ್ಷ ಮುಖ್ಯ ಎನ್ನುತ್ತಾರೆ. ಆದರೆ, ಪಕ್ಷಕ್ಕೆ ವ್ಯಕ್ತಿಯೂ ಅಷ್ಟೇ ಮುಖ್ಯ. ಹಾಗಾದರೆ, ಪ್ರಧಾನಿ ಮೋದಿ ಅವರ ಭಾವಚಿತ್ರ ಇಟ್ಟುಕೊಂಡ ಯಾಕೆ ಮತ ಕೇಳುತ್ತಾರೆ ಎಂದು ಪ್ರಶ್ನಿಸಿದರು.ಈ ಚುನಾವಣೆಯಲ್ಲಿ ಒಳ ಹೊಡೆತ  ಮತ್ತು ಹೊರ ಹೊಡೆತ ಭಾರೀ ಕೆಲಸ ಮಾಡಲಿದೆ. ಫಲಿತಾಂಶದ ದಿನ ಅದರ ಪರಿಣಾಮ ಗೊತ್ತಾಗಲಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು