ಹುಬ್ಬಳ್ಳಿ: ಶೆಟ್ಟರ್ ಗೆ ಟಿಕೆಟ್ ನಿರಾಕರಿಸಿರೋದಕ್ಕೆ ಸಕಾರಣವಿಲ್ಲ. 75 ವರ್ಷ ವಯಸ್ಸಾದವರಿಗೂ ಬಿಜೆಪಿ ಟಿಕೆಟ್ ಕೊಟ್ಟಿದೆ. ಜನಸಂಘದಿಂದ ಅವರ ರಾಜಕಾರಣ ಆರಂಭಗೊಂಡಿತ್ತು. ಟಿಕೆಟ್ ನಿರಾಕರಿಸಿರೋದು ಸಮುದಾಯಕ್ಕೆ ಅಪಮಾನ.ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇದೊಂದು ಷಡ್ಯಂತ್ರ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ನಡು ನೀರಲ್ಲಿ ಕೈಬಿಟ್ಟರು. ಲಕ್ಷ್ಮಣ ಸವದಿ ನಂತರ ಶೆಟ್ಟರ್ ಗೆ ಅನ್ಯಾಯ ಮಾಡಲಾಗಿದೆ.
ಇದೊಂದು ದೊಡ್ಡ ಅಪಮಾನ ಮಾಡಲಾಗಿದೆ.ಲಿಂಗಾಯತ ಸಮಾಜದ ಮೇಲೆ ಬಿಜೆಪಿ ದ್ವೇಷ ಸಾಧನೆ ಮಾಡ್ತಿದೆ. ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಬಿಸಾಡಿದರು. ಯಡಿಯೂರಪ್ಪ, ಸವದಿ, ಶೆಟ್ಟರ್ ನಂತರದ ಪಾಳಿ ಬೊಮ್ಮಾಯಿ ಅವರದ್ದು. ಮೂಲೆಗುಂಪು ಮಾಡೋದು ಖಚಿತ. ಎಚ್.ಡಿ.ಕೆ ಹೇಳಿದಂತೆಯೆ ಬ್ರಾಹ್ಮಣರನ್ನು ಸಿಎಂ ಮಾಡಲು ಹೊರಟಿದೆ. ಲಿಂಗಾಯಿತ ಸಮುದಾಯದ ಪರವಾಗಿ ಮಾತನಾಡುತ್ತಿದ್ದೇನೆ. ನಾವು ಬ್ರಾಹ್ಮಣ ಸಮುದಾಯದ ವಿರೋಧಿಗಳಲ್ಲ ಎಂದರು.