News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಶೆಟ್ಟರ್ ಗೆ ಟಿಕೆಟ್ ಮಿಸ್ – ಕಾರ್ಯಕರ್ತರಿಂದ ಪ್ರತಿಭಟನೆ

Shettar gets ticket, activists stage protest
Photo Credit : News Kannada

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಶೆಟ್ಟರ್ ಬೆಂಬಲಿಗರು ಕೇಶ್ವಾಪೂರ ಸರ್ಕಲ್ ಬಳಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರು ಪ್ರತಿಭಟನೆ ಹಾಗೂ ಹೋರಾಟ ಮೂಲಕ ಹೈ ಕಮಾಂಡ್ ಗೆ ಎಚ್ಚರಿಕೆ ನೀಡಿದರು. ಅಲ್ಲದೇ ರಸ್ತೆಯಲ್ಲಿಯೇ ಶೆಟ್ಟರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು. ಶೆಟ್ಟರ್, ಶೆಟ್ಟರ್, ಜಗದೀಶ್ ಶೆಟ್ಟರ್ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಮೂವತ್ತು ವರ್ಷಗಳ ಕಾಲ ಜನಪ್ರೀಯ ಶಾಸಕರಾಗಿ, ಸಚಿವರಾಗಿ,ಸಿಎಂ ಆಗಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ. ಒಂದೇ ಒಂದು ಕಪ್ಪು ಚುಕ್ಕೆ ಇರದ ಸಹೃದಯಿ ನಾಯಕನಿಗೆ ಈ ಬಾರಿ ಅವಕಾಶ ಕೊಡಲೇ ಬೇಕು ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು