ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಾಕಷ್ಟು ಸೂಚನೆ ಸಹ ನೀಡಿದ್ದು, ಎಲ್ & ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೂಡಲೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸಲಹೆ ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಉಂಟಾದ ಕುಡಿಯುವ ನೀರಿನ ಸಮಸ್ಯೆಯ ಕುರಿತು ಇಂದು ಎಲ್ & ಟಿ ಅಧಿಕಾರಿಗಳೊಂದಿಗೆ ಹುಬ್ಬಳ್ಳಿಯ ಗೃಹ ಕಚೇರಿಯಲ್ಲಿ ಸಭೆ ನಡೆಸಿ, ಚರ್ಚಿಸಿ, ಸಂಪೂರ್ಣ ಮಾಹಿತಿ ಪಡೆದು, ಶೀಘ್ರವೇ ಜವಳಿ ನಗರದ ಜನತೆಗೆ ಕುಡಿಯುವ ನೀರಿನ ಸರಿಯಾದ ಸರಬರಾಜು ಆಗಬೇಕು, ಈ ಕುರಿತು ಯಾವುದೇ ದೂರು ಜನತೆಯಿಂದ ಬರಬಾರದು ಎಂದು ಸೂಚಿಸಿದರು. ಇನ್ನೂ ಯಾವುದೇ ಪರಿಸ್ಥಿತಿಯಲ್ಲಿ ಅವಳಿನಗರದ ಜನರು ಕುಡಿಯುವ ನೀರಿನ ಸಮಸ್ಯೆ ಅನುಭವಿಸಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.