ಹುಬ್ಬಳ್ಳಿ: ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ವಿಚಾರವನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರು ಪಕ್ಷಕ್ಕಾಗಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಇದೇ ರೀತಿ ಅವರ ಸೇವೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಜಗದೀಶ್ ಶೆಟ್ಟರ್ ಜೊತೆಗೆ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರವಾಗಿ ಶೆಟ್ಟರ್ ಜೊತೆಗೆ ಸುದೀರ್ಘ ಚರ್ಚೆ ಮಾಡಿದ್ದೇನೆ.ಅವರು ಪಕ್ಷದಲ್ಲಿ ಇರಲಿದ್ದಾರೆ. ಮತ್ತೆ ಈ ಬಗ್ಗೆ ಕೇಂದ್ರದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಪಕ್ಷ ಬಿಡುವ ವಿಚಾರ ನನಗೆ ಗೊತ್ತಿಲ್ಲ. ಪಕ್ಷದಲ್ಲಿಯೇ ಇರುತ್ತಾರೆ ಎಂದು ಹೇಳಿದ್ದಾರೆ ಎಂದರು.