ಹುಬ್ಬಳ್ಳಿ: ಬಡವರ, ಆರ್ಥಿಕವಾಗಿ ಹಿಂದುಳಿದವರ ಹಸಿವನ್ನು ನೀಗಿಸುವ ಇಂದಿರಾ ಕ್ಯಾಂಟೀನ್ ಮುಚ್ಚಲು ಹೊರಟಿರುವ ಬಿಜೆಪಿ ಸರ್ಕಾರದ ನಡೆ ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಡವರ ಹೊಟ್ಟೆಯ ಮೇಲೆ ಬರೆ ಹಾಕುವ ಕೆಲಸವನ್ನು ಮಾಡುತ್ತಿರುವ ಬಿಜೆಪಿ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು, ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಹೆಸರು ಇರುವ ಕಾರಣಕ್ಕೆ ಕಡಿಮೆ ದರದಲ್ಲಿ ಬಡವರ ಹಸಿವನ್ನು ನೀಗಿಸುವ ಮೂಲಕ ಉಪಹಾರ, ಊಟ ಒದಗಿಸುವ ಇಂದಿರಾ ಕ್ಯಾಂಟಿನ್ ಮುಚ್ಚಲು ಹೊರಟಿದ್ದಾರೆ. ಇದು ಸಾರ್ವಜನಿಕರ ಹಾಗೂ ಬಡವರಿಗೆ ಮಾಡುವ ದೊಡ್ಡ ಅನ್ಯಾಯವಾಗಿದೆ ಎಂದರು.
ಹಸಿವು ಮುಕ್ತ ರಾಜ್ಯ ನಿರ್ಮಾಣದ ಕನಸನ್ನು ಕಂಡಿರುವ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸುಮಾರು ನಾಲ್ಕು ನೂರು ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಲಾಗಿತ್ತು. ಬಡವರು, ವಿದ್ಯಾರ್ಥಿಗಳು, ಆಟೋ ಚಾಲಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಇಂದಿರಾ ಕ್ಯಾಂಟಿನ್ ರಾಜಕೀಯ ಉದ್ದೇಶದಿಂದ ಬಡವರು, ವಿದ್ಯಾರ್ಥಿಗಳು, ಆಟೋ ಚಾಲಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಇಂದಿರಾ ಕ್ಯಾಂಟಿನ್ ರಾಜಕೀಯ ಉದ್ದೇಶದಿಂದ ಮುಚ್ಚಲು ಹೊರಟಿರುವುದು ನಿಜಕ್ಕೂ ಜನ ವಿರೋಧಿ ನಡೆಯಾಗಿದೆ. ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್ ಮುಚ್ಚಕೂಡದು ಎಂದು ಎಚ್ಚರಿಕೆ ನೀಡಿದರು.