ಹುಬ್ಬಳ್ಳಿ: ಕರ್ನಾಟಕದ ಜನರು ಕಷ್ಟಪಟ್ಟು ದುಡಿಯುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಅವರಿಗೆ ಯಾರ ಆಶೀರ್ವಾದವೂ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಹೇಳಿದ್ದಾರೆ.
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರದಿದ್ದರೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ರಾಜ್ಯಕ್ಕೆ ಸಿಗುವುದಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ಈ ರೀತಿ ಹೇಳಿದರು. ಇಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ತನ್ನ ಪುತ್ರ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಶಸ್ಸಿನಿಂದ ಬಿಜೆಪಿ ಕಂಗಾಲಾಗಿದೆ ಎಂದರು ಅವರು ಹೇಳಿದರು. ಬಿಜೆಪಿಯ ಲೂಟಿ, ಸುಳ್ಳು, ಅಹಂಕಾರ ಮತ್ತು ದ್ವೇಷದ ವಾತಾವರಣ ಕೊನೆಗೊಳಿಸಬೇಕಿದೆ. ಇಲ್ಲದಿದ್ದಲ್ಲಿ ರಾಜ್ಯ ಮತ್ತು ದೇಶ ಪ್ರಗತಿ ಹೊಂದಲು ಸಾಧ್ಯವಿಲ್ಲ ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಬೆದರಿಸಲು ಭಾರತೀಯ ಜನತಾ ಪಕ್ಷ ಪ್ರಯತ್ನಿಸುತ್ತಿದೆ ಎಂದರು. ಕಾಂಗ್ರೆಸ್ ವಿರುದ್ಧ ತೋಳು ತಿರುಚುವ ತಂತ್ರಗಳು ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯದಲ್ಲಿ ಆದಾಯ ತೆರಿಗೆ ದಾಳಿ ನಡೆಸಲಾಗುತ್ತಿದೆ ಎಂದರು. ಆದರೆ ಇಂತಹ ಕುತಂತ್ರ ಯಶಸ್ಸು ಪಡೆಯುವುದಿಲ್ಲ ಎಂದರು.