ಹುಬ್ಬಳ್ಳಿ: ಇವತ್ತಿನ ವಾತಾವರಣ ನೋಡಿದ್ರೆ ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು.ಮತದಾರರಿಗೆ ಆಮಿಷ ಒಡ್ಡಲಾಗುತ್ತದೆ ಎಂಬ ಮಾಹಿತಿ ನನ್ನ ಕಿವಿಗೆ ಬಿದ್ದಿದೆ.ಒಂದೊಂದು ಮತಕ್ಕೆ ಐದು ಸಾವಿರ ಸುದ್ದಿ ಕೇಳಿ ಶಾಕ್ ಆಯಿತ್ತು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಮತದಾನದ ನಂತರ ಮಾತನಾಡಿದ ಅವರು, ಕೆಲವು ಮತದಾರರು ಆಮಿಷಕ್ಕೆ ಒಳಗಾಗುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಈ ರೀತಿ ಆಗಬಾರದು. ಆಶೆ ಆಕಾಂಕ್ಷಿಗಳಿಗೆ ಬಲಿಯಾಗದೆ ಜನರು ಅಭಿವೃದ್ಧಿ ನೋಡಿ ಮತದಾನ ಮಾಡುತ್ತಾರೆ.ಇವತ್ತಿನ ರಾಜಕಾರಣ ಕುಲಗೆಟ್ಟ ಹೋಗಿದೆ. ಅಭಿವೃದ್ಧಿ ಆಧಾರಿತ ಚರ್ಚೆಗಳಲಾಗಲಿಲ್ಲ, ಆರೋಪ ಪ್ರತ್ಯಾರೋಪಗಳಿಗೆ ಪ್ರಚಾರ ಸೀಮಿತ ಆಯಿತು. ಇಂತಹ ವ್ಯವಸ್ಥೆ ಬದಲಾಗಬೇಕಿದೆ ಎಂದರು