ಹುಬ್ಬಳ್ಳಿ: ಉಲ್ಬಣಗೊಂಡ ಕುಡಿಯುವ ನೀರಿನ ಸಮಸ್ಯೆ, ಕೇಂದ್ರ ಸಚಿವ ಜೋಶಿ ಮಹತ್ವದ ಸಭೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕುಡಿಯುವ ನೀರಿಗಾಗಿ ಜನರು ನಿತ್ಯ ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುತುವರ್ಜಿ ವಹಿಸಿದ್ದು, ಅಧಿಕಾರಿಗಳಿಗೆ ಹಾಗೂ ಎಲ್ ಆ್ಯಂಡ್ ಟಿ ಕಂಪನಿಗೆ ಕ್ಲಾಸ್ ತೆಗೆದುಕೊಳ್ಳುವ ಮೂಲಕ ಜನರ ಸಮಸ್ಯೆ ಬಿಚ್ಚಿಡುವ ಕಾರ್ಯವನ್ನು ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರದ ಜನತೆಗೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಎಲ್ ಆಂಡ್ ಟಿ ಕಂಪನಿಯ ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಸಭೆ ನಡೆಸಿ ಚರ್ಚಿಸಿದ್ದು, ಕೂಡಲೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಎಲ್ ಆ್ಯಂಡ್ ಟಿ ಹಾಗೂ ಪಾಲಿಕೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಇನ್ನೂ ಕುಡಿಯುವ ನೀರಿನ ಸರಬರಾಜು ಮಾಡುವಲ್ಲಿ ಕಂಪನಿ ಮಾಡುತ್ತಿರುವ ವಿಳಂಬದ ಕಾರಣದಿಂದಾಗಿ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಶೀಘ್ರವೇ ಎಲ್ಲಾ ಸಮಸ್ಯೆ ಬಗೆಹರಿಸಿ ನೀರಿನ ಸರಬರಾಜು ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಜನರಿಗೆ ಸಮಸ್ಯೆಯಾದಾಗ ಪರಿಹರಿಸುವ ಕರ್ತವ್ಯ ನಮ್ಮದು, ಇದ್ರಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವರು ಸೂಚನೆ ನೀಡಿದರು.

Ashika S

Recent Posts

ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

ಸಂಗೀತ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್‌ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದು ಅಗೌರವ ತೋರಿಸಿರುವ ಘಟನೆ ನಡೆದಿದೆ. ಸುನಿಧಿ…

4 mins ago

ಕೋವಿಶೀಲ್ಡ್ ಮಗಳ ಸಾವಿಗೆ ಕಾರಣ: ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ತಂದೆ

ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು…

18 mins ago

ಟಿ20 ವಿಶ್ವಕಪ್‌: ಅ.6ರಂದು ಭಾರತ-ಪಾಕಿಸ್ತಾನ ಫೈಟ್‌

ಜೂನ್‌ನಲ್ಲಿ ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದ ಅತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ನಡೆಯುತ್ತಿದೆ. ಈ ಟೂರ್ನಿಯ ಮೇಲೆ ಎಲ್ಲರ ಚಿತ್ತ…

23 mins ago

ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದೆಯೋ ಅದ್ಕಕೆ ಅಲ್ಲಿನ ಆಂತರಿಕ ರಾಜಕೀಯ ಕಾರಣ: ಎಸ್ ಜೈಶಂಕರ್

ಖಲಿಸ್ತಾನಿ  ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಷಯವಾಗಿ ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದ್ದರೂ ಅಲ್ಲಿನ ಆಂತರಿಕ ರಾಜಕೀಯವೇ ಕಾರಣವಾಗಿದ್ದು, ಅದಕ್ಕೂ ಭಾರತಕ್ಕೂ…

31 mins ago

ಕಾಪು ಪಿಲಿಕೋಲ ಸಂಪನ್ನ: ಓರ್ವನನ್ನು ಸ್ಪರ್ಶಿಸಿದ ಪಿಲಿ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ…

47 mins ago

ಬಿಜೆಪಿಯ ʼಮೊಟ್ಟೆʼ ವಿಡಿಯೋ ವಿರುದ್ಧ ಕಾಂಗ್ರೆಸ್‌ ಕಿಡಿ

ಚುನಾವಣೆ ಎಲ್ಲೆಡೆ ರಂಗೇರಿದೆ. ಒಂದೆಡೆ ನಾಯಕರ ವಾಗ್ದಾಳಿ ಇನ್ನೊಂದೆಡೆ ಪಕ್ಷಗಳ ನಡುವೆ ಬೇರೆ ಬೇರೆ ರೀತಿಯಲ್ಲಿ ವಾಗ್ಧಾಳಿ ನಡೆಯುತ್ತಲೇ ಇದೆ.…

50 mins ago