ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಹೈ ಕಮಾಂಡ್ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಶೆಟ್ಟರ್ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಜೋಶಿ ಚರ್ಚೆ ನಡೆಸಿದರು. ಅಲ್ಲದೆ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಇಂದು ಅವರ ನಿವಾಸದಲ್ಲಿ ಶೆಟ್ಟರ್ ಅಭಿಮಾನಿಗಳ ಜೊತೆ ಸಭೆ ನಡೆಸಲಿದ್ದಾರೆ. ಇನ್ನು ಶೆಟ್ಟರ್ ನಿವಾಸಕ್ಕೆ ಪ್ರಹ್ಲಾದ ಜೋಶಿ ದಿಢೀರ್ ಭೇಟಿ ಸಾಕಷ್ಟು ವಿಚಾರಕ್ಕೆ ಪುಷ್ಠಿ ನೀಡಿದೆ. ಈ ಮಾತುಕತೆಯಲ್ಲಿ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.