News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ರಾಮ ಮಂದಿರ ಉದ್ಘಾಟನೆ: ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿರುವ ಹುಬ್ಬಳ್ಳಿ ಯುವಕ

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ.
Photo Credit : News Kannada

ಹುಬ್ಬಳ್ಳಿ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ.

ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ ಅವರಿಗೆ ಆಹ್ವಾನ ಬಂದಿದ್ದು, ಜ. 25ರಂದು ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ‌ನೀಡಿದ ಸುಜಯ ಶಾನಭಾಗ, ರಾಮ‌ ಪ್ರಾಣ‌ ಪ್ರತಿಷ್ಠಾಪನೆ ಸುಸಂದರ್ಭದಲ್ಲಿ‌ ಈ ಅವಕಾಶ ಸಿಕ್ಕಿದು ನಮ್ಮ ಸೌಭಾಗ್ಯ. ಹುಬ್ಬಳ್ಳಿಯವನಾಗಿ ನಾನು ಶ್ರೀರಾಮನಿಗೆ ಪುಷ್ಪ ಅರ್ಪಣೆ ಮಾಡಿತ್ತಿರುವ ಖುಷಿ ಇದೆ. 45 ನಿಮಿಷಗಳ ಕಾಲ ನೃತ್ಯ ರೂಪಕ ಇದಾಗಿದೆ. ವಸುಂದರ ದೊರೆಸ್ವಾಮಿ ಸೇರಿದಂತೆ ನಾಲ್ವರ ತಂಡ ನೃತ್ಯ ರೂಪಕದಲ್ಲಿ ಪಾಲ್ಗೊಳ್ಳುತ್ತಿದ್ದು, ಅಯೋಧ್ಯೆಯಲ್ಲಿ ಕಾರ್ಯಕ್ರಮ ನೀಡುತ್ತಿರುವರು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.

ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಸಣ್ಣ ಅಳಿಲು ಸಹ ಸಹಾಯ ಮಾಡಿದೆ ಎಂಬ ಉಲ್ಲೇಖ ರಾಯಾಯಣದಲ್ಲಿದೆ. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್’ನಲ್ಲಿ (ರೈಲ್ವೆ ನಿಲ್ದಾಣ) ನಿರ್ಮಿಸಲಾಗಿದ್ದು, ಈ ಕಲಾಕೃತಿಯನ್ನು ಹುಬ್ಬಳ್ಳಿಯ ಆರ್ಟ್ ವಾಲೇ ಸಂಸ್ಥೆ ನಿರ್ಮಿಸಿರುವುದು ಮತ್ತೊಂದು ವಿಶೇಷ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು