News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾನಿಸಿದ್ದೇನೆ : ಕೋನರೆಡ್ಡಿ

ಬೆಳಗಾವಿ ಅಧಿವೇಶನದಲ್ಲಿ ಹೆಚ್ಚು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾಣಿಸಿದ್ದೇನೆ.
Photo Credit : News Kannada

ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಹೆಚ್ಚು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾನಿಸಿದ್ದೇನೆ. ಅದರಂತೆ ಈ ಸಾರಿ ಜನರ ಬೇಡಿಕೆಗಳನ್ನು ಚರ್ಚಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಎನ್.ಹೆಚ್.ಕೊನರೆಡ್ಡಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಅಧಿವೇಶನದಲ್ಲಿ ಎಂತಹ ಪರಿಸ್ಥಿತಿಯಲ್ಲೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಎಳೆ ಎಳೆಯಾಗಿ ಚರ್ಚಿಸಲು ತಿರ್ಮಾಣ ಮಾಡಲಾಗಿದೆ. ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿ, ಬರಗಾಲದ ಸೇರಿದಂತೆ ಇದೀಗ ನಂಜುಂಡಪ್ಪ ವರದಿ ಜಾರಿಯಾಗಿತ್ತು. ಆದರೆ ಗುಲಬರ್ಗಾ ವಿಭಾಗಕ್ಕೆ ಕೆಕೆಡಿಬಿ ಎಂದು 371 ಜೆ ಅಡಿಯಲ್ಲಿ ಮಾಡಿದ್ದಾರೆ. ಅದರಂತೆ ಕಿತ್ತೂರು ಕರ್ನಾಟಕ ಭಾಗಕ್ಕೆ ಸರಿಸಮಾನವಾಗಿ ಯೋಜನೆ ಜಾರಿಯಾಗಬೇಕೆಂಬ ಕೂಗು ಎಲ್ಲ ಶಾಸಕರಲ್ಲಿದೆ. ಅದರಂತೆ ಈ ಅಧಿವೇಶನ ಉತ್ತಮ ರೀತಿಯಲ್ಲಿ ನಡೆಯಲಿದೆ ಎಂದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ರಾಜ್ಯದ ಅಧಿವೇಶನ, ಅಲ್ಲಿ ಬೆಂಗಳೂರು ಭಾಗದ ಚರ್ಚೆ ಬೇಡಾ ಎಂದು ಹೇಳಲು ಬರುವುದಿಲ್ಲ. ಈ ಹಿನ್ನೆಲೆ ಇಂದು ಯು.ಟಿ.ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಹೆಚ್ಚು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು