ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಹೆಚ್ಚು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾನಿಸಿದ್ದೇನೆ. ಅದರಂತೆ ಈ ಸಾರಿ ಜನರ ಬೇಡಿಕೆಗಳನ್ನು ಚರ್ಚಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಎನ್.ಹೆಚ್.ಕೊನರೆಡ್ಡಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಅಧಿವೇಶನದಲ್ಲಿ ಎಂತಹ ಪರಿಸ್ಥಿತಿಯಲ್ಲೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಎಳೆ ಎಳೆಯಾಗಿ ಚರ್ಚಿಸಲು ತಿರ್ಮಾಣ ಮಾಡಲಾಗಿದೆ. ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿ, ಬರಗಾಲದ ಸೇರಿದಂತೆ ಇದೀಗ ನಂಜುಂಡಪ್ಪ ವರದಿ ಜಾರಿಯಾಗಿತ್ತು. ಆದರೆ ಗುಲಬರ್ಗಾ ವಿಭಾಗಕ್ಕೆ ಕೆಕೆಡಿಬಿ ಎಂದು 371 ಜೆ ಅಡಿಯಲ್ಲಿ ಮಾಡಿದ್ದಾರೆ. ಅದರಂತೆ ಕಿತ್ತೂರು ಕರ್ನಾಟಕ ಭಾಗಕ್ಕೆ ಸರಿಸಮಾನವಾಗಿ ಯೋಜನೆ ಜಾರಿಯಾಗಬೇಕೆಂಬ ಕೂಗು ಎಲ್ಲ ಶಾಸಕರಲ್ಲಿದೆ. ಅದರಂತೆ ಈ ಅಧಿವೇಶನ ಉತ್ತಮ ರೀತಿಯಲ್ಲಿ ನಡೆಯಲಿದೆ ಎಂದರು.
ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ರಾಜ್ಯದ ಅಧಿವೇಶನ, ಅಲ್ಲಿ ಬೆಂಗಳೂರು ಭಾಗದ ಚರ್ಚೆ ಬೇಡಾ ಎಂದು ಹೇಳಲು ಬರುವುದಿಲ್ಲ. ಈ ಹಿನ್ನೆಲೆ ಇಂದು ಯು.ಟಿ.ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಹೆಚ್ಚು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದರು