ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾನಿಸಿದ್ದೇನೆ : ಕೋನರೆಡ್ಡಿ

ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಹೆಚ್ಚು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾನಿಸಿದ್ದೇನೆ. ಅದರಂತೆ ಈ ಸಾರಿ ಜನರ ಬೇಡಿಕೆಗಳನ್ನು ಚರ್ಚಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಎನ್.ಹೆಚ್.ಕೊನರೆಡ್ಡಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಅಧಿವೇಶನದಲ್ಲಿ ಎಂತಹ ಪರಿಸ್ಥಿತಿಯಲ್ಲೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಎಳೆ ಎಳೆಯಾಗಿ ಚರ್ಚಿಸಲು ತಿರ್ಮಾಣ ಮಾಡಲಾಗಿದೆ. ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿ, ಬರಗಾಲದ ಸೇರಿದಂತೆ ಇದೀಗ ನಂಜುಂಡಪ್ಪ ವರದಿ ಜಾರಿಯಾಗಿತ್ತು. ಆದರೆ ಗುಲಬರ್ಗಾ ವಿಭಾಗಕ್ಕೆ ಕೆಕೆಡಿಬಿ ಎಂದು 371 ಜೆ ಅಡಿಯಲ್ಲಿ ಮಾಡಿದ್ದಾರೆ. ಅದರಂತೆ ಕಿತ್ತೂರು ಕರ್ನಾಟಕ ಭಾಗಕ್ಕೆ ಸರಿಸಮಾನವಾಗಿ ಯೋಜನೆ ಜಾರಿಯಾಗಬೇಕೆಂಬ ಕೂಗು ಎಲ್ಲ ಶಾಸಕರಲ್ಲಿದೆ. ಅದರಂತೆ ಈ ಅಧಿವೇಶನ ಉತ್ತಮ ರೀತಿಯಲ್ಲಿ ನಡೆಯಲಿದೆ ಎಂದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ರಾಜ್ಯದ ಅಧಿವೇಶನ, ಅಲ್ಲಿ ಬೆಂಗಳೂರು ಭಾಗದ ಚರ್ಚೆ ಬೇಡಾ ಎಂದು ಹೇಳಲು ಬರುವುದಿಲ್ಲ. ಈ ಹಿನ್ನೆಲೆ ಇಂದು ಯು.ಟಿ.ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಹೆಚ್ಚು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ಚರ್ಚಿಸಲು ತಿರ್ಮಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದರು

Ramya Bolantoor

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

7 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

12 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

25 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

28 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

58 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago