News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೆ ಬಿಜೆಪಿ‌ ಇಂದಿನ ಸ್ಥಿತಿಗೆ ಕಾರಣ: ದಿಂಗಾಲೇಶ್ವರ ಸ್ವಾಮೀಜಿ

Ignoring senior leaders of the state is the reason for BJP's present state of affairs: Dingaleswara Swamiji
Photo Credit : News Kannada

ಹುಬ್ಬಳ್ಳಿ: ಯಡಿಯೂರಪ್ಪ ಅವರು ಅಧಿಕಾರದಿಂದ ನಿರ್ಗಮಿಸಿದ ನಂತರ ನಾನು ಹಿಂದೆ ಯಡಿಯೂರಪ್ಪ ಕಣ್ಣೀರನಲ್ಲಿ ಬಿಜೆಪಿ ಸರ್ಕಾರಕೊಚ್ಚಿ ಹೋಗತ್ತದೆ ಎಂದು ಹೇಳಿದ್ದೆ. ಇವತ್ತು ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿಂತಾರೆ .‌ ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೆ ಬಿಜೆಪಿ‌ ಇಂದಿನ ಸ್ಥಿತಿಗೆ ಕಾರಣ. ಯ ಡಿಯೂರಪ್ಪ, ಸವದಿ, ಶೆಟ್ಟರ್, ಈಶ್ವರಪ್ಪ ಕಡೆಗಣಸಿರೋದೆ ಇದಕ್ಕೆಲ್ಲ ‌ಕಾರಣ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಾನು ಅವತ್ತು ಒಬ್ಬ ವ್ಯಕ್ತಿ ಉದ್ದೇಶಿಸಿ ಮಾತಾಡಿರಲಿಲ್ಲ. ಯಡಿಯೂರಪ್ಪ ಎಲ್ಲರಿಗೆ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಯಡಿಯೂರಪ್ಪ ಅವ ರನ್ನು ಮುಂದುವರೆಸಿಬೇಕು ಎಂದಿದ್ದರು. ಯಾವದೋ ಕೆಟ್ಟ ಉದ್ದೇಶ,ಅಥವಾ ಸ್ವಾರ್ಥಕ್ಕೆ ತಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಿಸ್ಥಿತಿಗೆ ಕಾರಣ.ಯಡಿಯೂರಪ್ಪ ಅವರನ್ನು ಬದಲಾಯಿಸಿದ್ದು ಈ‌ ಪರಿಸ್ಥಿತಿಗೆ ಕಾರಣ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು