ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ ಅಭ್ಯರ್ಥಿ ಬಿಂಬಿಸುವ ಯತ್ನವು ಕಾಂಗ್ರೆಸ್ ನಲ್ಲಿ ಇದೊಂದು ಮೋಸದಾಟ ಅಷ್ಟೇ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ. ದಲಿತರನ್ನ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡಿದವು. ಆದರೆ ಅಧಿಕಾರಕ್ಕೆ ಬರಲಿಲ್ಲ ಅಂತಾ ಕಾಂಗ್ರೆಸ್ ನವರು ಗೊಬೆ ಕುರಿಸುವ ಹುನ್ನಾರ. ದಲಿತರ ಮೇಲೆ ಕಾಂಗ್ರೆಸ್ ಗೆ ಪ್ರೀತಿ ಇದ್ದರೆ 2013 ರಲ್ಲಿಯೇ ಮಾಡಬೇಕಿತ್ತು.
ಕಾಂಗ್ರೆಸ್ ಸ್ಪಷ್ಟವಾದ ಬಹುಮತ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಜಿ ಪರಮೇಶ್ವರ ರಾಜ್ಯ ಸುತ್ತಾಡಿ ಪಕ್ಷವನ್ನ ಅಧಿಕಾರಕ್ಕೆ ತಂದರು. ಆದರೆ ಜಿ ಪರಮೇಶ್ವರಗೂ ಏನು ಮಾಡಲಿಲ್ಲ. ಅಂದು ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕು ಅಂತಾ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಆಂತರಿಕ ಚುನಾವಣೆ ನಡೆಸಿದರು. ಸಿದ್ದರಾಮಯ್ಯಾ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಶಾಸಕರು ಮತ ಚಲಾವಣೆ ಮಾಡಿದರು.
ಸಿದ್ದರಾಮಯ್ಯಾಗೆ ಅಧಿಕ ಮತ ಬಂದವು. ಸಿದ್ದರಾಮಯ್ಯಾ ಸಿಎಂ ಅಭ್ಯರ್ಥಿ ಆಗಿ ಘೋಷಣೆ ಮಾಡಲಾಯಿತು. ನಾವು ಕಾಂಗ್ರೆಸ್ ಆಡಳಿತವನ್ನ ಬಹಳ ದಿನಗಳಿಂದ ನೋಡಿದ್ದೇವೆ. 60 ವರ್ಷಗಳ ಆಡಳಿತ, ಜೊತೆಗೆ ಜವಾಹರಲಾಲ್ ನೆಹರು ಮನೆತನದ 36 ವರ್ಷ ಆಡಳಿತ ಗೊತ್ತು. ಈಗ ಕಾಂಗ್ರೆಸ್ ನರಿಗೆ ದಲಿತರ ಮೇಲೆ ಪ್ರೀತಿ ಉಕ್ಕಿ ಬಂದಿದೆ ಎಂದರು.