News Karnataka Kannada
Saturday, May 11 2024
ಹುಬ್ಬಳ್ಳಿ-ಧಾರವಾಡ

ಮೋದಿ ಅವರನ್ನು ಸೋಲಿಸುವುದು ಸಾಧ್ಯವಿಲ್ಲದ ಮಾತು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

It is impossible to defeat Modi: Former CM Basavaraj Bommai
Photo Credit : News Kannada

ಹುಬ್ಬಳ್ಳಿ : ಇಡೀ ಭಾರತದಲ್ಲಿ ಪ್ರತಿ ಪಕ್ಷಗಳು ಶಕ್ತಿಯುಯವಾಗಿಲ್ಲ.ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ . ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಸಾಧ್ಯವಿಲ್ಲದ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ.ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ.ರಾಷ್ಟ್ರೀಯ ಮಟ್ಟದ ನರೇಂದ್ರ ಮೋದಿಯವರಿಗೆ ಗೌರವ, ಮನ್ನಣೆ ಸಿಗುತ್ತಿದೆ.

ಜೆಡಿಎಸ್ ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ..ಮಾತುಕತೆ ಪಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ.ವಿಪಕ್ಷ ಸ್ಥಾನ 18 ರ ನಂತ್ರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ.

ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ಊಹಾಪೋಹ.

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸೋನಿಯಾ ಗಾಂಧಿ ಬರ್ತಿದ್ದಾರೆ. ಗೃಹ ಲಕ್ಷ್ಮಿ ಈಗಾಗಲೇ ಯಡವಟ್ಟಾಗಿದೆ, ದಿನಾಂಕದ ಮೇಲೆ ದಿನಾಂಕ ಮುಂದುಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ಧಿಷ್ಟವಾದ ನಿಯಮಗಳನ್ನ ಮಾಡುತ್ತಿಲ್ಲ‌. ದೊಡ್ಡ ಭಾರ ಆಗುತ್ತಿರವ ಗೃಹಲಕ್ಷ್ಮಿ ಯೋಜನೆಯನ್ನ ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ದಿನಾಂಕ ಮುಂದೆ ಹಾಕಿ ಕೆಲವೇ ಸಮಯದಲ್ಲಿ, ಕೆಲವರಿಗೆ ಜನರಿಗೆ ಮಾತ್ರ ಪ್ರಾರಂಭ ಮಾಡುವ ಸರ್ಕಾರಕ್ಕಿದೆ. ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸ ಮಾಡುವಂತಹ ಉದ್ದೇಶ ಈ ಯೋಜನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು