ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಶೆಟ್ಟರ್ ಆಯ್ಕೆ ಆಗಿದ್ದು, ವರಿಷ್ಠರ ಸೂಚನೆ ಮೇರೆಗೆ ನಾನು ಇದಕ್ಕೆ ಒಪ್ಪಿದ್ದೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬೆಳಗಾವಿ ಉಸ್ತುವಾರಿ ಸಚಿವನಾಗಿ, ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸಿದ್ದೇನೆ. ಬೆಳಗಾವಿ ಜನತೆ ಜೊತೆಗೆ ಉತ್ತಮ ಒಡನಾಟ ಹೊಂದಿದ್ದೇನೆ. ಬೆಳಗಾವಿಯ ನಾಯಕರು ಕೂಡ ನನ್ನನ್ನು ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ ಎಂದರು.
ಬೆಳಗಾವಿ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಕಂಡಿದ್ದೇನೆ ಹಾಗೂ ಹೆಚ್ಚು ಓಡಾಟ ಕೂಡ ನಡೆಸಿದ್ದೇನೆ ಎಲ್ಲಾ ತಮ್ಮ ಬೀಗರು ಹಾಗೂ ಬೆಳಗಾವಿ ನಾಯಕರ ಜತೆಗೆ ಚರ್ಚೆ ನಡೆಸಿಯೇ ಬೆಳಗಾವಿ ಕ್ಷೇತ್ರಕ್ಕೆ ಹೋಗಲು ಒಪ್ಪಿಕೊಂಡಿದ್ದೇನೆ ಎಂದರು. ಬೆಳಗಾವಿ ಮರಾಠಾ ಸಮುದಾಯದ ನಾಯಕರು ಮೋದಿ ನಾಯಕತ್ವ, ಹಿಂದುತ್ವದ ಪರವಾಗಿ ನಿಲ್ಲುತ್ತಾರೆ. ಹಿಗಾಗಿ ಗೆಲುವು ನಮ್ಮದೆ ಎಂದಿದ್ದಾರೆ.