ಹುಬ್ಬಳ್ಳಿ : ಜಗದೀಶ್ ಶೆಟ್ಟರ್ ಈ ಭಾಗದ ಪ್ರಮುಖ ನಾಯಕರು ಹಿರಿಯ ನಾಯಕರು.ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೇವೆ. ನಾನೂ ಅವರ ವಿರುದ್ದ ಸ್ಪರ್ಧೆ ಮಾಡಿದ್ದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರೋ ಪ್ರಯತ್ನ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರೋ ಪ್ರಯತ್ನ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮಗೆ ಆದರ್ಶರು. ಮುಖ್ಯಮಂತ್ರಿ ಇರೋವಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡ್ತೀವಿ ಎಂದು ಹೇಳಲಾಗಿತ್ತು. ದಿಲ್ಲಿ ಮಟ್ಟದಲ್ಲಿ ಹುದ್ದೆ ಕೊಡೋದಾಗಿ ಹೇಳಿದ್ರು. ನಡ್ಡಾ ಅಮಿತ್ ಶಾ ಹೇಳಿದ್ರು. ನಾನು ನಿನ್ನೆ ಚರ್ಚೆ ಮಾಡಿ ಹೇಳಿದ್ವಿ. ಅವರು ಹೇಳಿರೋರಿಗೆ ಟಿಕೆಟ್ ಕೊಡ್ತೀವಿ ಎಂದಿತ್ತು ಎಂದರು.
ಶೆಟ್ಟರ್ ರಾಜೀನಾಮೆ ನೀಡಿರೋದು ನೋವು ಕಸಿವಿಸಿ ತಂದಿದೆ. ನಮಗೆಲ್ಲ ಪಕ್ಷದ ಆದರ್ಶ ಹೇಳಿದ್ರ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸೀಟ್ ಕೊಟ್ಟಿದ್ದು ಬಿಜೆಪಿ. ಇವತ್ತು ಬಾರತೀಯ ಜನತಾ ಪಕ್ಷ ಎಲ್ಲ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗೋ ಪ್ರಯತ್ನ. ಸಮಾಜಿಕ ಸಮೀಕರಣ ಮಾಡಿ ಹಲವಾರು ಬೇಡಿಕೆ ಈಡೇರಿಸಿ ದೀನದಳಿತರಿಗೆ, ಹಿಂದೂಳಿದ ವರ್ಗದವರಿಗೆ, ರೈತಾಪಿ ವರ್ಗ ಒಕ್ಕಲರಿಗೆ, ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿ ಇಂದ ಮಾತ್ರ ಸಾಧ್ಯ ಎಲ್ಲರಿಗೂ ಅವಕಾಶ ಕೊಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸೀಟ್ ಕೊಟ್ಟಿರುವುದು ಬಿಜೆಪಿ ಪಕ್ಷ. ಅತೀ ಹೆಚ್ಚು ಮಂತ್ರಿ ಸ್ಥಾನವನ್ನು ನಮ್ಮ ಬಿಜೆಪಿ ಪಕ್ಷ ಕೊಟ್ಟಿದೆ.ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆ ಎಂದರು.