ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಸೆಂಟ್ರಲ್ ಕ್ಷೇತ್ರದ ಮಹತ್ವದ ಸಭೆ ನಡೆಯುತ್ತಿದ್ದು, ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಗೌಪ್ಯ ಸಭೆ ನಡೆಯುತ್ತಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಗೋಕಲ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಗೌಪ್ಯ ಸಭೆ ನಡೆಯುತ್ತಿದೆ. ಈ ಗೌಪ್ಯ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್, ಪಾಲಿಕೆ ಉಪ ಮೇಯರ್ ಉಮಾ ಮುಖುಂದ, ಶಿವು ಮೆಣಸಿನಕಾಯಿ, ವೀರಣ್ಣ ಸವಡಿ, ಸಂತೋಷ ಚಹ್ವಾಣ, ಸೇರಿದಂತೆ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದಾರೆ.