ಹುಬ್ಬಳ್ಳಿ: ಬಿಜೆಪಿಯಿಂದ ಟಿಕೆಟ್ ವಂಚಿತಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಿಂದ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಶೆಟ್ಟರ್ ಅವರನ್ನು ಕುಟುಂಬಸ್ಥರು ಮತ್ತು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪುಷ್ಪಗಳಿಂದ ಸ್ವಾಗತ ಮಾಡಿಕೊಂಡರು.
ಇನ್ನು, ಶೆಟ್ಟರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡದ ಕಾರಣ ಕೆಲ ಬಿಜೆಪಿ ಪಾಲಿಕೆ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಭಿಮಾನಿಗಳು ಮಾತ್ರ ಶೆಟ್ಟರ್ ದಾರಿಯಲ್ಲೇ ಸಾಗಲು ಸಿದ್ಧರಾಗಿದ್ದಾರೆ. ಶೆಟ್ಟರ್ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಹರಿದು ಬರುತ್ತಿದ್ದಾರೆ.
ಭಾವುಕರಾಗಿ ಕಣ್ಣೀರು ಹಾಕಿದ ಪತ್ನಿ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡು, ಇಂದು ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ, ಪತಿ ಶೆಟ್ಟರ್ನ್ನು ತಬ್ಬಿಕೊಂಡು ಪತ್ನಿ ಶಿಲ್ಪಾ ಶೆಟ್ಟರ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.
ಬಿಜೆಪಿ ಗುಲಾಮಗಿರಿಗೆ ನನ್ನ ಗಂಡ ಬಲಿ ಆಗಬೇಕಾ : ಶಿಲ್ಪಾ ಶೆಟ್ಟರ್ ಕಣ್ಣೀರು
ಎಷ್ಟು ತಾಳ್ಮೆಯಿಂದ ಇದ್ರು ನನ್ನ ಗಂಡನನ್ನು ಬಿಜೆಪಿ ಅವರು ಕುಗ್ಗಿಸುತ್ತಿದ್ದಾರೆ, ಹೀನಾಯ, ಅಪಮಾನ ಮಾಡುತ್ತಿದ್ದಾರೆ. ಕ್ಷೇತ್ರದ ಜನಕ್ಕೆ ಬಿಜೆಪಿ ಅವಮಾನ ಮಾಡುತ್ತಿದೆ. ಜಗದೀಶ್ ಶೆಟ್ಟರ್ ಬಹಳ ನೊಂದುಕೊಂಡಿದ್ದಾರೆ. ಆದರೆ ಅವರು ಹೇಳುವುದಿಲ್ಲಾ ಎಂದು ಜಗದೀಶ್ ಶೆಟ್ಟರ್ ಪತ್ನಿ ಶಿಲ್ಪಾ ಶೆಟ್ಟರ್ ಕಣ್ಣೀರು ಹಾಕಿದರು.
ಒಬ್ಬರಿಗೂ ತಮ್ಮ ನೋವನ್ನು ತೋರಿಸಿ ಕೊಡುವುದಿಲ್ಲಾ. ಒಂದು ಕಣ್ಣೀರು ಹನಿ ನೀರು ಬಂದಿಲ್ಲಾ. ಅವಮಾನವನ್ನು ಎಷ್ಟು ಸಲ ಸಹಿಸಿಕೊಳ್ಳಬೇಕು, ಎಷ್ಟ ಸಲ ಗುಲಾಮಗಿರಿ ಮಾಡಬೇಕು ಎಂದು ಅಳಲು ತೋಡಿಕೊಂಡರು.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…