News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಜೈನ ಮುನಿ ಹತ್ಯೆ ಪ್ರಕರಣ ಸಿಬಿಐ ಗೆ ವಹಿಸಲ್ಲ ಎಂದ ಡಾ. ಜಿ ಪರಮೇಶ್ವರ್‌

Dr. G Parameshwara
Photo Credit : News Kannada

ಹುಬ್ಬಳ್ಳಿ: ಜೈನ್ ಮುನಿಗಳ ಹತ್ಯೆಯಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡುವುದಕ್ಕೆ ಆಗುವುದಿಲ್ಲ. ಈ ಪ್ರಕರಣವನ್ನ ಸಿಬಿಐ ಅಥವಾ ಯಾವುದಕ್ಕೂ ಕೊಡುವ ಅಗತ್ಯ ಇಲ್ಲ. ನಮ್ಮ ಪೋಲಿಸರು ಸಮರ್ಥರಿದ್ದಾರೆ ಎಂದು ಗೃಹ ಸಚಿ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಜೈನಮುನಿ ಗುಣಧರನಂದಿ‌ ಮಹಾರಾಜರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಹತ್ಯೆಯ ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಕೆಲಸ ಪೊಲೀಸರು ಮಾಡುತ್ತಾರೆ. ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಆರೋಪ ವಿಚಾರ ನನಗೂ ಬೇಜಾರು ತಂದಿದ್ದು, ಅದರಲ್ಲಿ ತಾರತಮ್ಯದ ಪ್ರಶ್ನೆ ಬರುವುದಿಲ್ಲ. ಘಟನೆ ನಡೆದ ಮೇಲೆ ಪೊಲೀಸರಿಗೆ ವಿಚಾರ ಗೊತ್ತಾಗಿ ಕಂಪ್ಲೇಂಟ್ ಆದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾಗಿದ್ದರೂ, ಬೋರ್ವೆಲ್ ನಲ್ಲಿ ಹಾಕಿದಂತ ದೇಹವನ್ನು ತೆಗೆಸಿ ಕ್ರಮ ತೆಗೆದುಕೊಂಡಿದ್ದಾರೆ ಇದು ಅತ್ಯಂತ ವೇಗವಾಗಿ ನಡೆದಿದ್ದು, ನಮ್ಮ ಇಲಾಖೆಗೆ ಅಭಿನಂದನೆ ಹೇಳ್ತೇನೆ ಅವರು ಶೀಘ್ರವಾಗಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು