ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಅಪರಾಧಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದು ಸ್ವಾಭಾವಿಕ ಪದ್ದತಿ, ಇದರಲ್ಲಿ ತಾರತಮ್ಯ ಪ್ರಶ್ನೆ ಇಲ್ಲ. ಘಟನೆ ಆದ ಮೇಲೆ ಅರೆಸ್ಟ್ ಮಾಡಿದ್ದಾರೆ. ದೇಹ ಕತ್ತರಿಸಿ ಬೋರ್ವೆಲ್ಗೆ ಹಾಕಿದ್ರು. ನಾನು ನಮ್ಮ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. ವರೂರಲ್ಲಿ ಜೈನ ಮುನಿಗಳು ಉಪವಾಸ ಕೂತಿದ್ದಾರೆ. ಅವರ ಬೇಡಿಕೆ ಕೇಳುತ್ತೇನೆ. ಮುಂದಿನ ದಿನದಲ್ಲಿ ಈ ರೀತಿ ಆಗದಂತೆ ನೋಡಿಕೊಳ್ತೀವಿ. ನಮ್ಮ ಇಲಾಖೆ ಸಮರ್ಥವಾಗಿದೆ. ಅರೆಸ್ಟ್ ಮಾಡಿದ್ದಾರೆ, ತನಿಖೆ ಶುರುವಾಗಿದೆ. ಸಿಬಿಐಗೆ ಕೊಡೋ ಅಗತ್ಯ ಕಾಣಲ್ಲ. ನಮ್ಮ ಇಲಾಖೆಯ ತನಿಖೆ ಮುಗಿದ ಮೇಲೆ ಸತ್ಯಾಸತ್ಯತೆ ಗೊತ್ತಾಗಲಿದೆ. ಕಾನೂನು ಕ್ರಮ ಆಗುತ್ತೆ, ಸುಮ್ನೆ ಅಪವಾದ ಮಾಡಬಾರದು. ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗ್ತಿಲ್ಲ. ಅವರಲ್ಲಿ ಆಂತರಿಕ ಒಳಜಗಳ ಇದೆ. ಅವರಿಗೆ ಎಷ್ಟರ ಮಟ್ಟಿಗೆ ಜವಾಬ್ದಾರಿ ಇದೆ ಅನ್ನೋದನ್ನು ರಾಜ್ಯದ ಜನ ಗಮನಿಸ್ತಿದಾರೆ ಎಂದರು.