ಧಾರವಾಡ: ನಗರದ ವಿದ್ಯಾರ್ಥಿನಿಯೊಬ್ಬಳು ಬೈಕ್ ಮೇಲೆ ಜಮ್ಮು-ಕಾಶ್ಮೀರಕ್ಕೆ ಏಕಾಂಗಿಯಾಗಿ ಸಂಚಾರ ಕೈಕೊಂಡು ಬುಧವಾರ ರಾತ್ರಿ ವಾಪಸ್ಸಾಗಿದ್ದಾಳೆ. ಧಾರವಾಡ ಜನರು ಪ್ರತೀಕ್ಷಾ ಹರವಿಶೆಟ್ಟರ್ ಸನ್ಮಾನಿಸಿ ಗೌರವಿಸಿ ಸ್ವಾಗತಿಸಿದರು.
ಇಲ್ಲಿನ ಡಾ.ಆರ್. ಎನ್. ಶೆಟ್ಟಿ ಕ್ರೀಡಾಂಗಣ ಬಳಿಯ ಕೆ.ಎಚ್.ಬಿ.ಕಾಲನಿ ನಿವಾಸಿ, 18 ವರ್ಷದ ಪ್ರತೀಕ್ಷಾ ಹರವಿಶೆಟ್ಟರ್ ಸಾಧನೆಗೈದ ವಿದ್ಯಾರ್ಥಿನಿ. ಸಂಚಾರ ನಿಯಮ ಪಾಲನೆ ಮತ್ತು ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮಟ್ ಧರಿಸುವ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತೀಕ್ಷಾ ಸಂಚಾರ ಕೈಕೊಂಡಿದ್ದಳು.
ಕಳೆದ ದಿ.13 ರಂದು ನಗರದಿಂದ ಕೆಟಿಎಂ ಡ್ಯೂಕ್ -390 ಬೈಕ್ ಮೇಲೆ ಹೊರಟ ಅವಳನ್ನು ಧಾರವಾಡ ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪೂರ, ಸಾರಿಗೆ ಅಧಿಕಾರಿ ಭೀಮಣ್ಣವರ, ನೌಕರರ ಸಂಘದ ಗಿರೀಶ ಚೌಡಕಿ ಮತ್ತಿತರರು ಸತ್ಕರಿಸಿ ಬೀಳ್ಕೊಟ್ಟಿದ್ದರು.
ನಂತರ ಧಾರವಾಡದಿಂದ ಲೋನಾವಾಲಾ, ವಡೋದರ, ಜೋಧಪುರ,ಅಮೃತಸರ ಮಾರ್ಗವಾಗಿ ಶ್ರೀನಗರ ತಲುಪಿದಳು. ಅಲ್ಲಿ ಲಾಲಚೌಕ್ ನಲ್ಲಿ ಕರುನಾಡಿನ ಬಾವುಟ ಹಾರಿಸಿದ ಸಂದರ್ಭದಲ್ಲಿ ಬ್ರಿಗೇಡಿಯರ್ ಮನೋಜ ಜೋಶಿ ಇತರರು ಸನ್ಮಾನಿಸಿದರು.
ಮರುದಿನದ ಶ್ರೀನಗರದಿಂದ ಪ್ರಯಾಣ ಆರಂಭಿಸಿ ಜಲಂಧರ, ಅಜೇರ, ಧುಲೆ ಮಾರ್ಗವಾಗಿ 9 ನೇ ದಿನಕ್ಕೆ ಧಾರವಾಡ ತಲುಪಿದಳು. ಸತತ ಒಂಬತ್ತು ದಿನಗಳ ಕಾಲ ಬೈಕ್ ಮೇಲೆ ತೆರಳಿ ಬುಧವಾರ ರಾತ್ರಿನಗರಕ್ಕೆ ಆಗಮಿಸಿದ ಪ್ರತೀಕ್ಷಾಳನ್ನು ಹಿರಿಯ ನ್ಯಾಯವಾದಿ ಶೇಖರ ಕವಳಿ, ಅಶೋಕ ಶೆಟ್ಟರ್, ಸಂಗಮೇಶ ಹನಸಿ, ಮಂಜುನಾಥ ಹಿರೇಮಠ, ರಾಜಶೇಖರ ಉಪ್ಪಿನ ಇತರರು ಬರಮಾಡಿಕೊಂಡರು.
ಶಿಕ್ಷಕ ಶಿವಯೋಗಿ ಹರವಿಶೆಟ್ಟರ್ ಅವರ ಪುತ್ರಿ ಪ್ರತೀಕ್ಷಾ, ಹುಬ್ಬಳ್ಳಿಯ ಬಿ.ವಿ.ಬಿ. ಕಾಲೇಜಿನಲ್ಲಿ ಬಿ.ಸಿ.ಎ.ಎರಡನೇ ಸೆಮಿಸ್ಟರ್ ವಿದ್ಯಾರ್ಥಿನಿ. ಸುಮಾರು 5,300 ಕಿ.ಮೀ. ದೂರವನ್ನು ನಿರಂತರ 9 ದಿನಗಳಲ್ಲಿ ಕ್ರಮಿಸುವ ಮೂಲಕ ” ಎಂಗೆಸ್ಟ್ ಸೊಲೋ ರೈಡರ್” ಎಂಬ ಹೆಗ್ಗಳಿಕೆಗೆ ಪ್ರತೀಕ್ಷಾ ಪಾತ್ರಳಾಗಿದ್ದಾಳೆ.
ಬಿಗ್ಬಾಸ್ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…
ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಈಗ ಮತ್ತೊಂದು ವಿವಾದಾತ್ಮಕ…
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…