ಹುಬ್ಬಳ್ಳಿ: ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಮಧ್ಯಾಹ್ನ 3 ಗಂಟೆಗೆ ನಮ್ಮ ಮನೆಗೆ ಬರಲಿದ್ದಾರೆ ಎಂದು ಕೊಲೆಯಾದ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಹೇಳಿದ್ದಾರೆ.
ಹುಬ್ಬಳ್ಳಿಯ ಬಿಡನಾಳ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಕರೆ ಮಾಡಿ ಮಧ್ಯಾಹ್ನ ಜೆಪಿ ನಡ್ಡಾ ಬರ್ತಾರೆ ಅಂತ ಹೇಳಿದ್ದಾರೆ. ಮಗಳನ್ನು ಕಳೆದುಕೊಂಡ ನಮಗೆ ಸಾಂತ್ವನ ಹೇಳಲು ಜೆಪಿ ನಡ್ಡಾ ಬರ್ತಾರೆ. ನಾಡಿನ ಅನೇಕ ಮಠಾಧಿಪತಿಗಳು ಬಂದು ಸಾಂತ್ವನ ಹೇಳಿದ್ದಾರೆ. ಇವತ್ತು ರಾಷ್ಟ್ರೀಯ ನಾಯಕರು ಬರ್ತಿದಾರೆ ಎಂದು ನಿರಂಜನ ಹಿರೇಮಠ ಭಾವುಕರಾದರು.
ಕಾಂಗ್ರೆಸ್ ಮುಖಂಡರು ಮನೆಗೆ ಬಂದು ಹೋಗಿದ್ದಾರೆ. ಇದರಲ್ಲಿ ರಾಜಕೀಯ ಬೇಡ. ನನ್ನ ಮಗಳನ್ನ ಕೊಲೆ ಮಾಡಿದ ಫಯಾಜ್ಗೆ ಇನ್ನು ಕೆಲವರು ಸಹಾಯ ಮಾಡಿದ್ದಾರೆ. ಕ್ರಿಮಿನಲ್ ಬ್ಯಾಕ್ ಗೌಂಡ್ ಇರೋರು, ಹಣ ಇರೋರು, ಪೊಲಿಟಿಕಲ್ ಬ್ಯಾಕ್ ಗೌಂಡ್ ಇರೋರು ಇದಾರೆ. ಅವರನ್ನು ಅರೆಸ್ಟ್ ಮಾಡಬೇಕು. ಫಯಾಜ್ನನ್ನ ಗಲ್ಲಿಗೇರಿಸಬೇಕು ಎಂದು ನಿರಂಜನ ಹಿರೇಮಠ ಆಗ್ರಹಿಸಿದ್ದಾರೆ.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…