ಹುಬ್ಬಳ್ಳಿ: ನಾವು ಅಧಿಕಾರಕ್ಕೆ ಬರುವ ಮುನ್ನವೇ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೇವು. ಅದೇ ರೀತಿಯಲ್ಲಿ ನಾವು ಶೋಷಿತ ವರ್ಗದವರಿಗೆ ಸಮಾನತೆ ನೀಡು ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರ ಮಹತ್ವದ ಕಾರ್ಯವನ್ನು ಮಾಡಿದೆ.
ಜೇನುಗೂಡು ಎಂಬುವಂತ ಮಾತಿಗೆ ಸಾಕ್ಷಿಯಾಗಿದ್ದ ಮೀಸಲಾತಿಯ ಜೇನುಗೂಡಿಗೆ ಬೊಮ್ಮಾಯಿಯವರ ಸರ್ಕಾರ ಕೈ ಹಾಕಿ ಎಲ್ಲರಿಗೂ ಸಿಹಿ ಹಂಚುವ ಕಾರ್ಯವನ್ನು ಮಾಡಿದ್ದಾರೆ. ದೇಶದಲ್ಲಿ ದಿನದಲಿತರಗೆ ಸೂಕ್ತ ಸಮಾನತೆ ನೀಡಿರುವುದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದರು.
ಒಳ ಮೀಸಲಾತಿ, ಮೀಸಲಾತಿ ಹೆಚ್ಚಳವನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡುವ ಮೂಲಕ ನಾವೆಲ್ಲರೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೋಡಿಸಬೇಕಿದೆ ಎಂದು ಅವರು ಅಭಿನಂದನೆ ಸಲ್ಲಿಸಿದರು.