News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಸೆ.20 ರಂದು ಕಲಘಟಗಿ ಬಂದ್- ಬಿಜೆಪಿ ಮುಖಂಡ ಶಶಿಧರ ನಿಂಬಣ್ಣವರ್

Kalaghatgi bandh on September 20: BJP leader Shashidhar Nimbannavar
Photo Credit : News Kannada

ಕಲಘಟಗಿ: ತಾಲೂಕಿನಲ್ಲಿ ಬರದ ಛಾಯೆಯಿಂದ ರೈತರು ಸಂಕಷ್ಟಕ್ಕೀಡಾದರೂ ಬರಪೀಡಿತ ಪ್ರದೇಶ ಘೋಷಣೆಯಲ್ಲಿ ಕಲಘಟಗಿಯನ್ನು ಕೈಬಿಟ್ಟಿದ್ದನ್ನು ಖಂಡಿಸಿ ಸೆ.20 ರಂದು ಕಲಘಟಗಿ ಬಂದ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡ ಶಶಿಧರ ನಿಂಬಣ್ಣವರ್ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾತನಾಡಿ, ಸಮರ್ಪಕ ಮಳೆ ಬಾರದೆ ಕ್ಷೇತ್ರದ ರೈತರು ಬಿತ್ತನೆ ಮಾಡಿದ ಭತ್ತ, ಕಬ್ಬು, ಸೋಯಾ ಅವರೇ, ಗೋವಿನ ಜೋಳ ಮುಂತಾದ ಬೆಳೆಗಳು ಹಾನಿಗೊಳಗಾಗಿವೆ.ಇದನ್ನು ಗಮನ ಹರಿಸದೆ ಇದ್ದರಿಂದ ಕೃಷಿಕ ವರ್ಗದ ಜನರು, ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಇದನ್ನು ಗಮನಹರಿಸದೆ ಸರ್ಕಾರ ಹಾಗೂ ಕೃಷಿ-ಕಂದಾಯ ಇಲಾಖೆ ಸರಿಯಾದ ಸಮೀಕ್ಷೆಯನ್ನು ಮಾಡಿ ಸರ್ಕಾರಕ್ಕೆ ಕಳುಹಿಸದೆ ನಿರ್ಲಕ್ಷ್ಯ ಮಾಡಿದ್ದು, ಸರ್ಕಾರವು ತಾಲೂಕಿನೊಂದಿಗೆ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಕಲಘಟಗಿ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂತೋಷ ಲಾಡ್ ಈ ಭಾಗದ ರೈತರ ಹಿತವನ್ನು ಕಾಪಾಡಬೇಕೆಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು