ಕಲಘಟಗಿ: ಹುಬ್ಬಳ್ಳಿಯ tv9 ವಾಹಿನಿಯ ವರದಿಗಾರ ಶಿವು ಪತ್ತಾರ ಅವರ ಮೇಲೆ ಕಲಘಟಗಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದರ್ಪ ಮರೆದ ಘಟನೆಗೆ ಸಂಬಂಧಿಸಿದಂತೆ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಘಟನೆಯನ್ನು ಖಂಡಿಸುತ್ತಿದ್ದಂತೆ. ಕಲಘಟಗಿ ಇನ್ಸ್ಪೆಕ್ಟರ್ ಎಸ್.ಎಸ್.ಕೌಜಲಗಿ ಅವರು ತಾವು ಮಾಡಿದ ತಪ್ಪನ್ನು ಒಪ್ಪಿ ಕ್ಷಮೆಯಾಚನೆ ಮಾಡಿದರು.
ಅಲ್ಲದೇ ಇನ್ಮೇಲೆ ಈ ತರಹದ ಘಟನೆಯನ್ನು ಮರುಕಳಿಸದಂತೆ ನೋಡಿಕೊಳ್ಳುವೆ ಎಂದು ತಿಳಿಸಿದ್ದು, ಅಷ್ಟಾಗ್ಯೂ ಪತ್ರಕರ್ತರು ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಈ ವೇಳೆ ಹಿರಿಯ ಪೋಲಿಸ್ ಅಧಿಕಾರಿಗಳು ಚುನಾವಣೆ ಸಭೆಯಲ್ಲಿದ್ದ ಕಾರಣ ಎರಡು ದಿನಗಳ ಒಳಗಾಗಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.
ಈ ಹಿನ್ನೆಲೆಯಲ್ಲಿ ನಮ್ಮ ಸಹೋದ್ಯೋಗಿ ಪತ್ರಕರ್ತನ ಮೇಲೆ ದೌರ್ಜನ್ಯ ಮಾಡಿದ ಅಧಿಕಾರಿ ಕ್ಷಮೆಯಾಚನೆ ಮಾಡಿದ್ದು, ಹೀಗಾಗಿ ಪ್ರತಿಭಟನೆಯನ್ನು ಮೊಟಕುಗೊಳಿಸಲಾಗಿದೆ.