ಕಲಘಟಗಿ: ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದ ವರದಿಗೆ ಹೋಗಿದ್ದ ಪತ್ರಕರ್ತರ ಮೇಲೆ ಕಲಘಟಗಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದರ್ಪ ತೋರಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪೊಲೀಸ್ ಠಾಣೆಯ ಮುಂದೆಯೇ ಮೌನ ಪ್ರತಿಭಟನೆ ನಡೆಸಿದರು.
ಕಲಘಟಗಿ ಇನ್ಸ್ಪೆಕ್ಟರ್ ಎಸ್.ಎಸ್.ಕೌಜಲಗಿ ಅವರು ಪತ್ರಕರ್ತರ ಮೇಲೆ ದರ್ಪ ತೋರಿದ್ದು, ಅವಾಚ್ಯ ಶಬ್ದದೊಂದಿಗೆ ನಿಂದಿಸಿದ್ದು, ಈ ಹಿನ್ನೆಲೆಯಲ್ಲಿ ಪತ್ರಕರ್ತರು ಇನ್ಸ್ಪೆಕ್ಟರ್ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪತ್ರಕರ್ತರ ಮನವೊಲಿಸಲು ಮುಂದಾಗಿದ್ದು, ಪತ್ರಕರ್ತರ ಮೇಲಿನ ದರ್ಪಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಪ್ರತಿಭಟನಾನಿರತ ಪತ್ರಕರ್ತರು ಪಟ್ಟು ಹಿಡಿದಿದ್ದಾರೆ.