ಕುಂದಗೋಳ: ಚಿಕ್ಕನಗೌಡರ ಅವರಿಗೆ ವ್ಯಾಪಕ ಜನಬೆಂಬಲ

ಕುಂದಗೋಳ: ಕುಂದಗೋಳ ಸಾರ್ವತ್ರಿಕ ವಿಧಾನಸಭಾ ಚುನಾವಣೆ ದಿನೇ ದಿನೇ ಸಮೀಪಿಸುತ್ತಿದ್ದಂತೆ ಮಾಜಿ ಶಾಸಕ ಪಕ್ಷೇತರ ಅಭ್ಯರ್ಥಿ ಎಸ್.ಐ ಚಿಕ್ಕನಗೌಡರ ಅವರಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ತನ್ನ ಚಿಹ್ನೆಯಾದ ಕುಕ್ಕರ್‌ಅನ್ನು ತಲೆ ಮೇಲೆ ಹೊತ್ತು ಹಳ್ಳಿಹಳ್ಳಿ ಮೆರೆಸಿ ಮತಯಾಚನೆ ಮಾಡುತ್ತಿರುವ ಚಿಕ್ಕನಗೌಡರಿಗೆ ಜನ ತಮ್ಮ ತಮ್ಮ ಗ್ರಾಮಗಳಿಗೆ ಅದ್ದೂರಿ ಸ್ವಾಗತ ಕೋರುತ್ತಲಿದ್ದಾರೆ.

ಈಗಾಗಲೇ ಚಿಕ್ಕನಗೌಡರ ಭೇಟಿ ನೀಡಿದ ಹಳ್ಳಿಗಳಲ್ಲಿ ಅಭಿಮಾನಿಗಳು ಜೆಸಿಬಿ ಯಂತ್ರದ ಮೂಲಕ ಹೂಮಳೆ ಸುರಿಸಿ ಸ್ವಾಗತ ಗೈಯುವುದು, ಚಕ್ಕಡಿ ಮೆರವಣಿಗೆ ಮಾಡುವುದರ ಜೊತೆಗೆ ಹಾರ ಹಾಕಿ ಸನ್ಮಾನಿಸಿ ಮತ ನೀಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಅದರಂತೆ ಬಿಳೇಬಾಳ, ದೇವನೂರು, ಹೊಸ ಹಂಚಿನಾಳ, ಹಳೇ ಹಂಚಿನಾಳ, ಕುಬಿಹಾಳ, ಮತ್ತಿಗಟ್ಟಿ, ರಾಮಾಪೂರ, ಹನುಮನಹಳ್ಳಿ, ತೀರ್ಥ ಗ್ರಾಮಗಳಲ್ಲಿ ನಡೆದ ಚಿಕ್ಕನಗೌಡರ ಮತಯಾಚನೆ ಭೇಟಿ ಬೃಹತ್ ರೋಡ್ ಶೋ ಆಗಿ ಮಾರ್ಪಟ್ಟು ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿತು.

Sneha Gowda

Recent Posts

ಅಲ್‌–ಜಜೀರಾ ಸುದ್ದಿವಾಹಿನಿ ಕಚೇರಿ ಮುಚ್ಚಲು ಸರ್ಕಾರ ತೀರ್ಮಾನಿಸಿದೆ ಎಂದ ಇಸ್ರೇಲ್ ಪ್ರಧಾನಿ

ಕತಾರ್ ಮಾಲೀಕತ್ವದ ಅಲ್‌–ಜಜೀರಾ ಸುದ್ದಿವಾಹಿನಿಯ ಸ್ಥಳೀಯ ಕಚೇರಿಗಳನ್ನು ಮುಚ್ಚಲು ಸರ್ಕಾರ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್…

1 min ago

40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ: ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ…

24 mins ago

ಅಕ್ರಮ ಗೋಮಾಂಸ ಸಾಗಾಟ: ವಾಹನ ಪೊಲೀಸರ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ…

33 mins ago

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…

55 mins ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು…

1 hour ago

ಬ್ರೆಜಿಲ್‌ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ, ಭೂ ಕುಸಿತ: 57 ಮಂದಿ ಮೃತ್ಯು

ಬ್ರೆಜಿಲ್‌ನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಪ್ರವಾಹ ಮತ್ತು ಮಣ್ಣು ಕುಸಿತದಿಂದ ಅವಘಡ ಸಂಭವಿಸಿ. 57 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ…

1 hour ago