News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಕುಂದಗೋಳ: ಕುಟುಂಬಸ್ಥರಿಗೆ ತಿಳಿಹೇಳಿ ಬಾಲ್ಯ ವಿವಾಹ ನಿಲ್ಲಿಸಿದ ಅಧಿಕಾರಿಗಳು

Child marriage stopped by officials after informing family
Photo Credit : News Kannada

ಕುಂದಗೋಳ: ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೋರ್ವಳಿಗೆ  ಮದುವೆ ಮಾಡಲು ನಿಶ್ಚಯಿಸಿದ್ದು ಈ ಬಗ್ಗೆ ಕುಟುಂಬಕ್ಕೆ ಅಧಿಕಾರಿಗಳು ತಿಳಿ ಹೇಳಿ ಮದುವೆ ನಿಲ್ಲಿಸಿದ ಘಟನೆ ಕುಂದಗೋಳ ತಾಲೂಕಿನ ರಟಗೇರಿ ಗ್ರಾಮದಲ್ಲಿ ನಡೆದಿದೆ.

ಈ ಬಗ್ಗೆ ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಬಾಲಕಿಯ ಮನೆಗೆ ಧಾವಿಸಿ ಮದುವೆಯನ್ನು ತಡೆದು ಕುಟುಂಬಸ್ಥರಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು, ಬಾಲ್ಯ ವಿವಾಹ ಕೈಗೊಂಡಲ್ಲಿ ಆಗಬಹುದಾದ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಅದಲ್ಲದೆ ಮುಂದಿನ ದಿನಗಳಲ್ಲಿ ಸಹ ಬಾಲ್ಯ ವಿವಾಹ ಮಾಡದಂತೆ ಅಥವಾ ಬಾಲ್ಯ ವಿವಾಹ ಕೈಗೊಂಡರೆ ಕನಿಷ್ಠ ಒಂದು ವರ್ಷದವರೆಗೆ ಜೈಲು ಹಾಗೂ 1 ರಿಂದ 2 ಲಕ್ಷ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ಸಹ ನೀಡಿದ್ದಾರೆ.

ಸದ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಯೋಜನಾಧಿಕಾರಿಗಳು, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬಾಲಕಿಯನ್ನು ಬಾಲ್ಯ ವಿವಾಹದಿಂದ ರಕ್ಷಿಸಿ ಹುಬ್ಬಳ್ಳಿಯ ಘಂಟಿಕೇರಿ ಬಾಲಕಿಯರ ಬಾಲ ಮಂದಿರದಲ್ಲಿ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು