ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.
ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು.
ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಸಂತೋಷ ಲಾಡ್ ಬೆಂಬಲಿಗರಿಗೆ ಸಂತಸ ತಂದಿದೆ.