ಹುಬ್ಬಳ್ಳಿ : ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮಕ್ಕೆ ನನ್ನನ್ನು ಕರೆದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅಸಮಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪರಿಷತ್ ಸದಸ್ಯ ಇದ್ರೂ ಕೆಲ ಕಾರ್ಯಕ್ರಮಗಳಿಗೆ ಕಡೆಗಣನೆ ಮಾಡಿದ್ದಾರೆ. ಇದೊಂದೆ ಕಾರ್ಯಕ್ರಮ ಅಲ್ಲ ನಾಲ್ಕೈದು ಕಾರ್ಯಕ್ರಮಕ್ಕೆ ಕಡೆಗಣನೆ ಮಾಡಿದ್ದಾರೆ. ಇದರಿಂದ ನನಗೆ ಬೇಸರವಾಗಿದೆ. ಯಾಕೆ ಹೀಗೆ ಆಗ್ತಿದೆ ಅನ್ನೋದು ಅರ್ಥ ಆಗತಿಲ್ಲ. ಆದ್ರೆ ವೀರಶೈವ ಲಿಂಗಾಯತ ನಾಯಕರಿಗೆ ನಾಯಕತ್ವ ಕೊಟ್ರೆ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ವೀರಶೈವ ಲಿಂಗಾಯತರಿಗೆ ಕೊಡಬೇಕು. ನಾನು ಪಕ್ಷ ಬಿಟ್ಟು ಹೋಗಲ್ಲ ಲಿಂಗಾಯತ ನಾಯಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುತ್ತೇನೆ. ಅನೇಕ ಕಾಂಗ್ರೆಸ್ ದೊಡ್ಡ ನಾಯಕರು ನನ್ನ ಸಂಪರ್ಕ ಮಾಡಿದ್ದಾರೆ.
ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದು ಸಮಸ್ಯೆ ಆಗಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಸಿದ್ರು .ಬಿಜೆಪಿಯಲ್ಲಿ ಇರೋದೆ ಅಲ್ಪ ಸ್ವಲ್ಪ ಲಿಂಗಾಯತ ನಾಯಕರು. ಅವರನ್ನು ಅವೈಡ್ ಮಾಡಿದ್ರೆ ಬಿಜೆಪಿ ಕೆಟ್ಟ ಸ್ಥಿತಿಗೆ ಹೋಗುತ್ತದೆ. ರಾಜ್ಯದ ಬಿಜೆಪಿ ಉಸ್ತುವಾರಿಗಳು ಬದಲಾಗಬೇಕು ಎಂದರು.