ಪ್ಲಾಸ್ಟಿಕ್, ಕಸದ ರಾಶಿಗೆ ಬೆಂಕಿ ಹಚ್ಚಿದ ಸ್ಥಳೀಯ ನಿವಾಸಿಗೆ ದಂಡ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಕೇಶ್ವಾಪುರದ ಮುಖ್ಯ ರಸ್ತೆಯ ಪಕ್ಕ, ತ್ಯಾಜ್ಯ ಸಂಗ್ರಹದ ಕಾಂಪ್ಯಾಕ್ಟ್ ಸ್ಟೇಷನ್ ಎದುರು ಪ್ಲಾಸ್ಟಿಕ್ ಹಾಗೂ ಕಸದ ರಾಶಿಗೆ ಬೆಂಕಿ ಹಚ್ಚಿದ ಸ್ಥಳೀಯ ನಿವಾಸಿ ಮಹೇಶ್ವರಿ ಹಿರೇಮಠ ಅವರಿಗೆ ಪಾಲಿಕೆ ದಂಡ ವಿಧಿಸಿದೆ.

ಆರೋಗ್ಯ ನಿರೀಕ್ಷಕರ ನಿಷ್ಕಾಳಜಿ ಕುರಿತು, ವಲಯ ಕಚೇರಿ 6ರ ವ್ಯಾಪ್ತಿಯ ವಾರ್ಡ್ ನಂ. 45ರ ಆರೋಗ್ಯ ನಿರೀಕ್ಷಕಿ ನೀಲಮ್ಮ ಅಂಗಡಿ ಅವರಿಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. 24 ಗಂಟೆಯೊಳಗೆ ಲಿಖಿತ ಉತ್ತರ ನೀಡಬೇಕು. ಇಲ್ಲವಾದರೇ ತಪ್ಪಿತಸ್ಥರ ವಿರುದ್ಧ ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

‘ಕೇಶ್ವಾಪುರ ಮುಖ್ಯರಸ್ತೆಯ ಬೆಂಗೇರಿ ಕ್ರಾಸ್ ಬಳಿ ಮಹೇಶ್ವರಿ ಅವರು ಗೂಡಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಅಲ್ಲಿ ಸಂಗ್ರಹವಾದ ಪ್ಲಾಸ್ಟಿಕ್‌ ಹಾಗೂ ಕಸಕ್ಕೆ ಬೆಂಕಿ ಹಚ್ಚಿ ವಾತಾವರಣ ಹಾಳು ಮಾಡುತ್ತಿದ್ದರು. ಸಾರ್ವಜನಿಕರು ನೀಡಿದ್ದ ವಾಟ್ಸ್ಆ್ಯಪ್ ದೂರಿನ ಮೇರೆಗೆ, ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಆರಿಸಲಾಗಿದೆ.

ಕಸಕ್ಕೆ ಬೆಂಕಿ ಹಚ್ಚಿದವರಿಂದ 200 ದಂಡ ಪಾವತಿಸಿಕೊಳ್ಳಲಾಗಿದೆ. ಆರೋಗ್ಯ ನಿರೀಕ್ಷಕರ ಬೇಜವಾಬ್ದಾರಿಗೆ ಕಾರಣ ಕೇಳಿ ನೋಟಿಸ್‌ ಸಹ ಜಾರಿ ಮಾಡಲಾಗಿದೆ’ ಎಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಬಿ.ಎಂ. ತಿಳಿಸಿದರು.

Ashika S

Recent Posts

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

7 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

27 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

52 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago