ಹುಬ್ಬಳ್ಳಿ: ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ, ಕಾಮನ್ ಆಗಿ ಅಮಿತ್ ಶಾ ಸಭೆ ನಡೆಸಿದ್ದಾರೆ. ಪ್ರಧಾನ ಮಂತ್ರಿಗಳ ಪ್ರವಾಸದ ವಿವರಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆಂದು ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಹೇಳಿದರು.
ನಗರದ ಖಾಸಗಿ ಹೊಟೇಲ್ ನಲ್ಲಿ ಅಮಿತ್ ಶಾ ಭೇಟಿ ಮಾಡಿ ಮಾತನಾಡಿದ ಅವರು ಸೆಂಟ್ರಲ್ ಕ್ಷೇತ್ರದಲ್ಲಿ ಕಾರ್ಯತಂತ್ರ ಅವಶ್ಯಕತೆ ಇಲ್ಲ. ಜನರು, ಕಾರ್ಯಕರ್ತರು, ಮತದಾರರೇ ಡಿಸೈಡ್ ಮಾಡಿದ್ದಾರೆ. ಅಲ್ಲಿ ಯಾವುದೇ ರೀತಿಯ ಸ್ಟ್ರಾಟೆಜಿ ಅವಶ್ಯಕತೆ ಇಲ್ಲ. ಅಲ್ಲಿ ಜನರೇ ತೀರ್ಮಾನ ಮಾಡಿದ್ದಾರೆ, ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಗೆಲುವು ಸಾಧಿಸಲಿದೆ ಎಂದರು.
ಲಿಂಗಾಯತರಿಗೆ ಬಿಜೆಪಿಯಿಂದ ಅನ್ಯಾಯದ ವಿಚಾರಕ್ಕೆ, ಐವತ್ತು ವರ್ಷದ ಕರ್ನಾಟಕದ ಇತಿಹಾಸದಲ್ಲಿ ಕೇವಲ 9 ತಿಂಗಳ ಅವಧಿಗೆ ವೀರೇಂದ್ರ ಪಾಟೀಲರನ್ನ ಮುಖ್ಯಮಂತ್ರಿ ಮಾಡಿ, ಅವರನ್ನ ಮನೆಗೆ ಕಳುಹಿಸಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಹಕೀಕತ್ ಏನಿದೆ ಅಂತಾ ಕರ್ನಾಟಕದ ಜನತೆಗೆ ಗೊತ್ತಿದೆ.
ಇದರ ಬಗ್ಗೆ ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ, ಶೆಟ್ಟರ್ ಫ್ಯಾಕ್ಟರ್ ವರ್ಕ್ ವಿಚಾರಕ್ಕೆ, ಸೆಂಟ್ರಲ್ ಕ್ಷೇತ್ರದಲ್ಲಿ ಯಾವ ಫ್ಯಾಕ್ಟರ್ ವರ್ಕ್ ಆಗಲ್ಲ. ಅಮಿತ್ ಶಾ ಹೇಳಿದ್ದಾರೆ. 35 ಸಾವಿರ ಲೀಡ್ ಆಗಬೇಕು ಅಂತ. ಹೀಗಾಗಿ ಕನಿಷ್ಠ ಪಕ್ಷ 35 ರಿಂದ 40 ಸಾವಿರ ಅಂತರದಲ್ಲಿ ಮಹೇಶ ಟೆಂಗಿನಕಾಯಿ ಗೆಲ್ಲಲಿದ್ದಾರೆ ಎಂದರು.