ಹುಬ್ಬಳ್ಳಿ: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆಗಾರ ಗಂಡನನ್ನು ಬಂಧಿಸುವಲ್ಲಿ ಕೊನೆಗೂ ಹುಬ್ಬಳ್ಳಿಯ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ರವಿವಾರ ನೇಕಾರ ನಗರದ ಬಸವೇಶ್ವರ ಕಾಲೋನಿಯಲ್ಲಿನ ಬಾಡಿಗೆ ಮನೆಯಲ್ಲಿ ಹೆಂಡತಿ ಸುಧಾ ಜೊತೆಗೆ ವಾಸವಿದ್ದ ಶಿವಯ್ಯ, ತಡ ರಾತ್ರಿ ಮಲಗಿದ್ದ ಸುಧಾಳ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಆದ್ರೆ ಶಿವಯ್ಯ ಮೊಬೈಲ್ ಕೂಡ ಮನೆಯಲ್ಲಿಯೇ ಬಿಟ್ಟು ಹೋಗಿದ್ದ. ಹೀಗಾಗಿ ಈತ ಎಲ್ಲಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಗದೆ ಭಾರಿ ತಲೆನೋವಾಗಿತ್ತು.
ಆದರೆ ಈತನ ಪತ್ತೆಗೆ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ತಂಡ ಸತತ ಪ್ರಯತ್ನದಿಂದ ಆರೋಪಿಯನ್ನು ಅರಸೀಕೆರೆಯಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಕೊಲೆ ಮಾಡಿದ ಆರೋಪಿಯನ್ನು ಇದೀಗ ನಗರಕ್ಕೆ ಕರೆ ತರುತ್ತಿದ್ದಾರೆ.