ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಾಗಿದ್ದು, ಇದರಿಂದ ಕೈಗಾರಿಕೋದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿದೆ. ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ, ಉತ್ತರ ಕರ್ನಾಟಕದ ಸಣ್ಣ ಕೈಗಾರಿಕೆಗಳ ಸಂಘದಿಂದ ನಗರದ ಗೋಕುಲ್ ರಸ್ತೆಯಲ್ಲಿರು ಇಂಡಸ್ಟ್ರಿಯಲ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ದರದಿಂದ, ಸಣ್ಣ ಕೈಗಾರಿಕೆಗಳು ಬೆಳೆಯಲು ಸಾಧ್ಯವಿಲ್ಲ. ಇದರಿಂದ ಸಣ್ಣ ಕೈಗಾರಿಕೆಗಳು ನೆಲ ಕಚ್ಚುತ್ತಿವೆ. ಆದ್ದರಿಂದ ಸರ್ಕಾರ ಕೂಡಲೆ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.