News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ ಎಂದ ಪ್ರಮೋದ್ ಮುತಾಲಿಕ್

Chamarajanagar: Activities have started with appeasement politics: Pramod Muthalik
Photo Credit :

ಹುಬ್ಬಳ್ಳಿ: ಸಿದ್ದರಾಮಯ್ಯ ಅವರ ಮಾಂಸ ಸೇವನೆ ವಿಚಾರದಲ್ಲಿ ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ಸರಿಯಲ್ಲ ಎಂದು  ಶ್ರೀರಾಮಸೇನೆ ಸಂಸ್ಥಾನಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರೀಯೆಸಿದ ಅವರು, ಮಾಂಸ ಸೇವನೆಯು ಒಂದು ಚರ್ಚೆಯ ವಿಷಯವೇ ಅಲ್ಲ. ಬಿಜೆಪಿಯವರು ಸುಮ್ಮನೆ ಸಿದ್ದರಾಮಯ್ಯ ಅವರನ್ನು ಎಳೆದು ತರುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಅವರು ಸಾವರ್ಕರ್ ಬಗ್ಗೆ ಸರಿಯಾಗಿ ತಿಳಿದುಕೊಂಡ ನಂತರ ಅವರು ಮಾತನಾಡಬೇಕು. ಮತಾಂಧ ಟಿಪ್ಪು ಸುಲ್ತಾನನ್ನು ಇವರು ಹೀರೊ ಮಾಡಲು ಹೊರಟಿದ್ದಾರೆ. ನಾವು ಮನೆಮನೆಗೆ ತೆರಳಿ ಸಾವರ್ಕರ್​ ಬಗ್ಗೆ ತಿಳವಳಿಕೆ ನೀಡುತ್ತೇವೆ. ಪ್ರತಿ ಗಣೇಶ ಪೆಂಡಾಲ್​ನಲ್ಲೂ ಸಾವರ್ಕರ್​ ಫೋಟೊ ಇಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು