ಧಾರವಾಡ : ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವಿಧ ಯೋಜನೆಗಳಿಗೆ ಚಾಲನೆ ದೊರಕಿದೆ. ಸಾಕಷ್ಟು ಅಭಿಮಾನಿಗಳು ಸೇರಿರುವುದು ಎಲ್ಲರ ಅಚ್ಚರಿಯನ್ನು ಮೂಡಿಸಿದೆ.
ವಿವಿಧ ಯೋಜನೆಗಳ ಸಮರ್ಪಣೆ , ಶಂಕುಸ್ಥಾಪನೆ ವಿವರ
- ಐಐಟಿ
410 ಎಕರೆ ವಿಸ್ತೀರ್ಣದ ವಿಶಾಲ ನಿವೇಶನದಲ್ಲಿ ,852 ಕೋಟಿ ರೂ.ಯೋಜನಾ ವೆಚ್ಚದಲ್ಲಿ ಸ್ಕಾರ್ಯಕ್ಯೋಜನ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮೊದಲ ಹಂತದ ಕಟ್ಟಡದ ಉದ್ಘಾಟನೆ. ಪ್ರಸ್ತುತ ಈ ಸಂಸ್ಥೆಯಲ್ಲಿ 73 ಬೋಧಕರು,35 ಸಿಬ್ಬಂದಿ ಹಾಗೂ 856 ವಿದ್ಯಾರ್ಥಿಗಳಿದ್ದಾರೆ. ಬಿ-ಟೆಕ್,ಬಿ.ಎಸ್,ಎಂ ಎಸ್,ಎಂ ಟೆಕ್ ಹಾಗೂ ಪಿಹೆಚ್ಡಿ ಪದವಿಗಳು ಲಭ್ಯ. - ವಿಶ್ವದ ಅತಿ ಉದ್ದನೆಯ ರೈಲ್ವೇ ಪ್ಲಾಟ್ ಫಾರ್ಮ್
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲ್ವೇ ನಿಲ್ದಾಣದಲ್ಲಿ 20 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಪಾದಚಾರಿ ಕೆಳಸೇತುವೆ ಹಾಗೂ 1507 ಮೀ.ಉದ್ದದ ವಿಶ್ವದ ಅತಿ ಉದ್ದನೆಯ ರೈಲ್ವೇ ಪ್ಲಾಟ್ ಫಾರ್ಮ್ ಉದ್ಘಾಟನೆ. - ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ರೈಲ್ವೇ ಮಾರ್ಗದ ವಿದ್ಯುದೀಕರಣ
ವಿಜಯನಗರ, ಕೊಪ್ಪಳ, ಗದಗ , ಧಾರವಾಡ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳ ಮೂಲಕ ಹಾಯ್ದು ಹೋಗುವ 245 ರೈಲ್ವೇ ಕಿ.ಮೀ.ಉದ್ದದ ಹೊಸಪೇಟೆ -ಹುಬ್ಬಳ್ಳಿ- ತಿನೈಘಾಟ್ ರೈಲ್ವೇ ಮಾರ್ಗದ ವಿದ್ಯುದೀಕರಣ ಕಾಮಗಾರಿ 519 ಕೋಟಿ ರೂ.ವೆಚ್ಚದಲ್ಲಿ ಪೂರ್ಣಗೊಂಡಿದೆ. - ಉನ್ನತೀಕರಣಗೊಂಡ ಹೊಸಪೇಟೆ ರೈಲು ನಿಲ್ದಾಣ
13 ಕೋಟಿ ರೂ.ವೆಚ್ಚದಲ್ಲಿ ಉನ್ನತೀಕರಣಗೊಂಡಿರುವ ಹೊಸಪೇಟೆ ರೈಲ್ವೇ ನಿಲ್ದಾಣ ಲೋಕಾರ್ಪಣೆ. - 353 ಕೋಟಿ ರೂ.ಗಳ ಸ್ಮಾರ್ಟ್ ಸಿಟಿ ಯೋಜನೆಗಳು
ನಾಗರಿಕರ ಜೀವನ ಮಟ್ಟ ಸುಧಾರಣೆಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ 353 ಕೋಟಿ ರೂ.ವೆಚ್ಚದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ.
ಶಂಕುಸ್ಥಾಪನೆಗೊಂಡ ಕಾರ್ಯಕ್ರಮಗಳು
- ಜಲಜೀವನ ಮಿಷನ್ ಬಹುಗ್ರಾಮ ಕುಡಿಯುವ ನೀರು ಯೋಜನೆ
1042 ಕೋಟಿ ರೂ.ವೆಚ್ಚದಲ್ಲಿ, 86 ಎಂಎಲ್ಡಿ ನೀರು ಸಂಸ್ಕರಣಾ ಘಟಕ ನಿರ್ಮಾಣ.ಮಲಪ್ರಭಾ ನದಿಯ ರೇಣುಕಾಸಾಗರ ಜಲಾಶಯದಿಂದ 2 ಲಕ್ಷ ಮನೆಗಳಿಗೆ ಶುದ್ಧೀಕರಿಸಿದ ಕುಡಿಯುವ ನೀರು ಸರಬರಾಜು.
ಜಿಲ್ಲೆಯ 396 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಒಂದು ಪಟ್ಟಣಕ್ಕೆ ಸುಸ್ಥಿರ ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ . - ಕ್ರೀಡಾ ಸಂಕೀರ್ಣ
ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ 166 ಕೋಟಿ ರೂ.ವೆಚ್ಚದಲ್ಲಿ ಕ್ರೀಡಾ ಸಂಕೀರ್ಣಕ್ಕೆ ಶಂಕುಸ್ಥಾಪನೆ. - ಜಯದೇವ ಹೃದ್ರೋಗಗಳ ಆಸ್ಪತ್ರೆ
ಹುಬ್ಬಳ್ಳಿಯ ರಾಯನಾಳ ಬಳಿ 11.36 ಎಕರೆ ಪ್ರದೇಶದಲ್ಲಿ,250 ಕೋಟಿ ರೂ.ವೆಚ್ಚದಲ್ಲಿ ಜಯದೇವ ಹೃದ್ರೋಗಗಳ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಶಂಕುಸ್ಥಾಪನೆ. - ತುಪ್ಪರಿಹಳ್ಳ ಪ್ರವಾಹ ನಿಯಂತ್ರಣ ಯೋಜನೆ
150 ಕೋಟಿ ರೂ.ವೆಚ್ಚದಲ್ಲಿ ತುಪ್ಪರಿಹಳ್ಳ ಪ್ರವಾಹ ಹಾನಿ ತಡೆಯಲು, ಆಯ್ದ ಭಾಗಗಳಲ್ಲಿ ತಡೆಗೋಡೆ ಹಾಗೂ ವಡ್ಡುಗಳನ್ನು ನಿರ್ಮಾಣಕ್ಕೆ ಚಾಲನೆ ಪ್ರಧಾನಿಯವರು ವೇದಿಕೆಯ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.